SHIVAMOGGA LIVE NEWS | 28 SEPTEMBER 2023
SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೆರವಣಿಗೆಯಲ್ಲಿ ಭಾಗವಹಿಸಿರುವ ಜನರಿಗೆ ಊಟ (food), ಪಾನೀಯ ವ್ಯವಸ್ಥೆ ಮಾಡಲಾಗಿದೆ.
ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಊಟ, ತಿಂಡಿ, ಪಾನೀಯ ವ್ಯವಸ್ಥೆ ಮಾಡಿದಾರೆ. ಎಸ್ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಬಿ.ಹೆಚ್.ರಸ್ತೆಯಲ್ಲಿ ಊಟ, ತಿಂಡಿ, ನೀರು, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ- ಸಕ್ರೆಬೈಲು ಆನೆ ಬಿಡಾರದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ
ಸಂಘ ಸಂಸ್ಥೆಗಳ ಪ್ರತಿನಿಧಿಗಳೆ ಊಟ, ತಿಂಡಿಯನ್ನು ಜನರಿಗೆ ಬಡಿಸುತ್ತಿದ್ದಾರೆ. ಪುಳಿಯೊಗರೆ, ಮೊಸರನ್ನ, ಉಪ್ಪಿಟ್ಟು ಸೇರಿದಂತೆ ವಿವಿಧ ತಿಂಡಿ ವಿತರಣೆ ಮಾಡಲಾಗುತ್ತಿದೆ. ಇತ್ತ ಅಲ್ಲಲ್ಲಿ ಜ್ಯೂಸ್, ಮಜ್ಜಿಗೆ, ನೀರು ವಿತರಣೆ ಕಾರ್ಯವು ಬಿರುಸಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200