SHIMOGA NEWS, 17 SEPTEMBER 2024 : ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ (Procession) ಆರಂಭವಾಗಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಟ್ರಾಕ್ಟರ್ ಮೇಲೆ ಕೂರಿಸಲಾಯಿತು. ಪಟಾಕಿ ಸಿಡಿಸಿ ವಾದ್ಯಗಳೊಂದಿಗೆ ಕೋಟೆ ರಸ್ತೆಗೆ ಗಣಪತಿ ಮೂರ್ತಿ ತರಲಾಯಿತು.
ಬೃಹತ್ ಹಾರ, ಸ್ವಾಮೀಜಿಯಿಂದ ಪೂಜೆ
ಮೆರವಣಿಗೆಗು ಮುನ್ನ ಹಿಂದೂ ಮಹಾಸಭಾ ಗಣಪತಿಗೆ ಬೃಹತ್ ಹಾರಗಳನ್ನು ಅರ್ಪಿಸಲಾಯಿತು. ಜೆಸಿಬಿಗಳನ್ನು ಬಳಸಿ ಹಾರ ಅರ್ಪಣೆ ಮಾಡಲಾಯಿತು. ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಗಣಪತಿ ಮೂರ್ತಿಗೆ ಪೂಜೆ ಸಲ್ಲಿಸಿದರು. ಆ ಬಳಿಕ ಮೆರವಣಿಗೆ ಆರಂಭವಾಯಿತು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಭೋವಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ರವಿಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಸೇರಿದಂತೆ ಹಲವರು ಇದ್ದರು. ಸದ್ಯ ಗಣಪತಿ ಮೆರವಣಿಗೆ ರಾಮಣ್ಣಶ್ರೇಷ್ಠಿ ಪಾರ್ಕ್ವರೆಗೆ ತಲುಪಿದೆ.
ಇದನ್ನೂ ಓದಿ » ಹಿಂದೂ ಮಹಾಸಭಾ ಮೆರವಣಿಗೆ, ಹೇಗಿದೆ ಬಂದೋಬಸ್ತ್? ಇಲ್ಲಿದೆ ಡಿಟೇಲ್ಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200