ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 SEPTEMBER 2023
SHIMOGA : ಅರಣ್ಯ ಇಲಾಖೆಯ ಶ್ರೀಗಂಧಕೋಠಿಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ ಹುತಾತ್ಮರಿಗ ನಮನ (Homage) ಸಲ್ಲಿಸಿದರು.
[su_quote cite=”ನ್ಯಾ. ಮಂಜುನಾಥ ನಾಯಕ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ“]ದೇಶ ರಕ್ಷಣೆಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡುವ ಸೈನಿಕನಿಗೆ ದೊರೆಯುವ ಗೌರವ, ದೇಶದ ಅಮೂಲ್ಯ ವನ್ಯ ಸಂಪತ್ತನ್ನು ರಕ್ಷಿಸುವ ಅರಣ್ಯ ಸಿಬ್ಬಂದಿ ಹಾಗೂ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರತರಾದಾಗ ಮೃತರಾದಾಗಲೂ ಅದೇ ರೀತಿಯ ಗೌರವ ಸೌಲಭ್ಯ ದೊರೆಯುವಂತಾಗಬೇಕು.[/su_quote]

[su_quote cite=”ಡಾ. ಆರ್.ಸೆಲ್ವಮಣಿ, ಜಿಲ್ಲಾಧಿಕಾರಿ“]ಭಾರಿ ಪ್ರಮಾಣದಲ್ಲಿ ಕಾಡು ನಾಶಗೊಳಿಸಿ, ಕೃತಕವಾಗಿ ಮರಗಳನ್ನು ನೆಡುವುದರಿಂದ ಪರಿಸರ ಮತ್ತು ಅರಣ್ಯ ಸಂರಕ್ಷಿಸಿದಂತಾಗಲಿದೆ ಎಂದು ಅನೇಕರು ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಇದು ಸಲ್ಲದು. ಇರುವ ಅರಣ್ಯವನ್ನು ಅದು ಇರುವಂತಹ ರೀತಿಯಲ್ಲಿಯೇ ಉಳಿಸಿ, ಬೆಳೆಸಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.[/su_quote]
[su_quote cite=”ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ“]ಮನುಷ್ಯನ ಅವ್ಯಾಹತ ದಾಳಿಯಿಂದಾಗಿ ಅರಣ್ಯಗಳು ದಿನೇ ದಿನೆ ನಾಶಗೊಳ್ಳುತ್ತಿವೆ. ಮನುಷ್ಯನ ಆಸೆಗೆ ಮಿತಿಯಿಲ್ಲದಂತಾಗಿದೆ. ಇದರಿಂದಾಗಿ ಅರಣ್ಯದಲ್ಲಿನ ಅಸಂಖ್ಯಾತ ಮರಗಳು, ಪ್ರಾಣಿ ಪಕ್ಷಿ ಸಂಕುಲದ ನಿರಂತರ ದಾಳಿಗೆ ತುತ್ತಾಗುತ್ತಿದೆ. ಇದರ ನಿಯಂತ್ರಣ ಅನಿವಾರ್ಯವಾಗಿದೆ. ಇಂತಹ ಸಂದಿಗ್ಧ ಸಂದರ್ಭ ಅರಣ್ಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಭದ್ರತೆ, ಶಾಂತಿಪಾಲನೆ, ಅರಣ್ಯ ಸಂರಕ್ಷಣೆ ಗಡಿರಕ್ಷಣೆಗೆ ಸಮನಾದ ಕಾರ್ಯವಾಗಿದೆ.[/su_quote]

[su_quote cite=”ಡಾ. ಕೆ.ಟಿ.ಹನುಮಂತಪ್ಪ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ“]ಹೆಚ್ಚುತ್ತಿರುವ ಜನಸಂಖ್ಯೆಯು ಭೂಮಿ, ಅರಣ್ಯ, ಸಸ್ಯ ಮತ್ತು ಪ್ರಾಣಿ ಸಂಕುಲದ ನಾಶಕ್ಕೆ ಕಾರಣವಾಗುತ್ತಿದೆ. ಎಲ್ಲರು ಅರಿತು ಅರಣ್ಯ ರಕ್ಷಣೆಗೆ ಮುಂದಾಗಬೇಕು. ಅರಣ್ಯ ರಕ್ಷಕರು ಕೂಡ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು.[/su_quote]
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ, ಸಿಬ್ಬಂದಿ, ಹುತಾತ್ಮರಿಗೆ ಪುಷ್ಪ ಗುಚ್ಛವಿಟ್ಟು ಗೌರವ ಸಲ್ಲಿಸಿದರು.
ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















