SHIMOGA : ಅರಣ್ಯ ಇಲಾಖೆಯ ಶ್ರೀಗಂಧಕೋಠಿಯಲ್ಲಿ ಅರಣ್ಯಹುತಾತ್ಮರ ದಿನಾಚರಣೆ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ ಹುತಾತ್ಮರಿಗ ನಮನ (Homage) ಸಲ್ಲಿಸಿದರು.
ದೇಶ ರಕ್ಷಣೆಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡುವ ಸೈನಿಕನಿಗೆ ದೊರೆಯುವ ಗೌರವ, ದೇಶದ ಅಮೂಲ್ಯ ವನ್ಯ ಸಂಪತ್ತನ್ನು ರಕ್ಷಿಸುವ ಅರಣ್ಯ ಸಿಬ್ಬಂದಿ ಹಾಗೂ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರತರಾದಾಗ ಮೃತರಾದಾಗಲೂ ಅದೇ ರೀತಿಯ ಗೌರವ ಸೌಲಭ್ಯ ದೊರೆಯುವಂತಾಗಬೇಕು.ನ್ಯಾ. ಮಂಜುನಾಥ ನಾಯಕ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ
ಭಾರಿ ಪ್ರಮಾಣದಲ್ಲಿ ಕಾಡು ನಾಶಗೊಳಿಸಿ, ಕೃತಕವಾಗಿ ಮರಗಳನ್ನು ನೆಡುವುದರಿಂದ ಪರಿಸರ ಮತ್ತು ಅರಣ್ಯ ಸಂರಕ್ಷಿಸಿದಂತಾಗಲಿದೆ ಎಂದು ಅನೇಕರು ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಇದು ಸಲ್ಲದು. ಇರುವ ಅರಣ್ಯವನ್ನು ಅದು ಇರುವಂತಹ ರೀತಿಯಲ್ಲಿಯೇ ಉಳಿಸಿ, ಬೆಳೆಸಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.ಡಾ. ಆರ್.ಸೆಲ್ವಮಣಿ, ಜಿಲ್ಲಾಧಿಕಾರಿ
ಮನುಷ್ಯನ ಅವ್ಯಾಹತ ದಾಳಿಯಿಂದಾಗಿ ಅರಣ್ಯಗಳು ದಿನೇ ದಿನೆ ನಾಶಗೊಳ್ಳುತ್ತಿವೆ. ಮನುಷ್ಯನ ಆಸೆಗೆ ಮಿತಿಯಿಲ್ಲದಂತಾಗಿದೆ. ಇದರಿಂದಾಗಿ ಅರಣ್ಯದಲ್ಲಿನ ಅಸಂಖ್ಯಾತ ಮರಗಳು, ಪ್ರಾಣಿ ಪಕ್ಷಿ ಸಂಕುಲದ ನಿರಂತರ ದಾಳಿಗೆ ತುತ್ತಾಗುತ್ತಿದೆ. ಇದರ ನಿಯಂತ್ರಣ ಅನಿವಾರ್ಯವಾಗಿದೆ. ಇಂತಹ ಸಂದಿಗ್ಧ ಸಂದರ್ಭ ಅರಣ್ಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಭದ್ರತೆ, ಶಾಂತಿಪಾಲನೆ, ಅರಣ್ಯ ಸಂರಕ್ಷಣೆ ಗಡಿರಕ್ಷಣೆಗೆ ಸಮನಾದ ಕಾರ್ಯವಾಗಿದೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ
ಹೆಚ್ಚುತ್ತಿರುವ ಜನಸಂಖ್ಯೆಯು ಭೂಮಿ, ಅರಣ್ಯ, ಸಸ್ಯ ಮತ್ತು ಪ್ರಾಣಿ ಸಂಕುಲದ ನಾಶಕ್ಕೆ ಕಾರಣವಾಗುತ್ತಿದೆ. ಎಲ್ಲರು ಅರಿತು ಅರಣ್ಯ ರಕ್ಷಣೆಗೆ ಮುಂದಾಗಬೇಕು. ಅರಣ್ಯ ರಕ್ಷಕರು ಕೂಡ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು.ಡಾ. ಕೆ.ಟಿ.ಹನುಮಂತಪ್ಪ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ, ಸಿಬ್ಬಂದಿ, ಹುತಾತ್ಮರಿಗೆ ಪುಷ್ಪ ಗುಚ್ಛವಿಟ್ಟು ಗೌರವ ಸಲ್ಲಿಸಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ