ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021
ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಹೆಚ್ಚಳಕ್ಕೆ ಶಿವಮೊಗ್ಗ ಜಿಲ್ಲಾಡಳಿತ ನಿರ್ಧರಿಸಿದೆ. ಸದ್ಯ 41 ಪ್ರಾಥಮಿಕ ಆರೋಗ್ಯ ಕೇಂದ್ರ, ಎಂಟು ಖಾಸಗಿ ಅಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಈ ಸಂಖ್ಯೆ ಹೆಚ್ಚಳಕ್ಕೆ ಯೋಜಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಆಸ್ಪತ್ರೆಗಳ ಸಂಖ್ಯೆ ಹೆಚ್ಚಳಕ್ಕೇನು ಕಾರಣ?
ಹೆಚ್ಚು ಜನರಿಗೆ ಕೋವಿಡ್ ಲಸಿಕೆ ಪೂರೈಕೆ ಮಾಡುವ ಉದ್ದೇಶದಿಂದ ಲಸಿಕಾ ವಿತರಣೆ ಕೇಂದ್ರಗಳನ್ನು ಹೆಚ್ಚಳ ಮಾಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ದೂರದ ಕೇಂದ್ರಗಳಿಗೆ ಹೋಗಬೇಕಾಗಿದೆ. ಹಾಗಾಗಿ ಹೆಚ್ಚಿವರು ಲಸಿಕಾ ಕೇಂದ್ರಗಳತ್ತ ಆಗಮಿಸುತ್ತಿಲ್ಲ. ಇದೇ ಕಾರಣಕ್ಕೆ ಲಸಿಕಾ ಕೇಂದ್ರಗಳನ್ನು ಹೆಚ್ಚಿಸಲು ಯೋಜಿಸಲಾಗುತ್ತಿದೆ.
ನೂರರ ಸನಿಹಕ್ಕೆ ಲಸಿಕಾ ವಿತರಣಾ ಕೇಂದ್ರ
ಮಾರ್ಚ್ 1ರಿಂದ ಸಾರ್ವಜನಿಕರಿಗೆ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಮಾರ್ಚ್ 8ರಿಂದ ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ವಿತರರಣೆ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ | ನಂಜಪ್ಪ ಆಸ್ಪತ್ರೆ ಸೇರಿ ಎಂಟು ಖಾಸಗಿ, 41 ಸರ್ಕಾರಿ ಆಸ್ಪತ್ರೆಯಲ್ಲಿ ನಾಳೆಯಿಂದ ಕೋವಿಡ್ ಲಸಿಕೆ, ಯಾರಿಗೆಲ್ಲ ಸಿಗುತ್ತೆ ಲಸಿಕೆ?
ಈಗ ಇರುವ ಲಸಿಕಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಳ ಮಾಡಲು ಯೋಜಿಸಲಾಗಿದೆ. ಜಿಲ್ಲೆಯ 33 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಲಸಿಕೆ ವಿತರಣೆ ಮಾಡಲಾಗುತ್ತದೆ. 93 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲು ಪ್ಲಾನ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ತಿಳಿಸಿದ್ದಾರೆ.
ಎರಡು ತಿಂಗಳು ಬರಿ ವಾರಿಯರ್ಸ್ಗೆ ಲಸಿಕೆ
ಶಿವಮೊಗ್ಗದಲ್ಲಿ ಜನವರಿ ತಿಂಗಳಿಂದ ಕೋವಿಡ್ ಲಸಿಕೆ ವಿತರಣೆ ಆರಂಭವಾಯಿತು. ಆರಂಭದ ಎರಡು ತಿಂಗಳು ಕರೋನ ವಾರಿಯರ್ಸ್, ಫ್ರಂಟ್ ಲೈನ್ ವಾರಿಯರ್ಸ್ಗೆ ಲಸಿಕೆ ವಿತರಣೆ ಆರಂಭವಾಯಿತು.
ಶೇ.121ರಷ್ಟು ಫ್ರಂಟ್ ಲೈನ್ ವಾರಿಯರ್ಸ್, ಶೇ.69ರಷ್ಟು ಕರೋನ ವಾರಿಯರ್ಸ್ಗೆ ಲಸಿಕೆ ನೀಡುವ ಗುರಿ ಸಾಧಿಸಲಾಗಿದೆ ಎಂದು ಡಾ.ರಾಜೇಶ ಸುರಗೀಹಳ್ಳಿ ತಿಳಿಸಿದ್ದಾರೆ.
ಮನೆ ಮನೆಯ ಸರ್ವೆ ಕಾರ್ಯ
60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕಿದೆ. ಆದರೆ ಅಡ್ಡಪರಿಣಾಮದ ಭೀತಿ, ಲಸಿಕಾ ಕೇಂದ್ರ ದೂರದಲ್ಲಿದೆ ಎಂಬ ಕಾರಣಕ್ಕೆ, ಹಲವರು ಲಸಿಕೆ ಹಾಕಿಸಿಕೊಂಡಿಲ್ಲ. ಇದೇ ಕಾರಣಕ್ಕೆ ಮನೆ ಮನೆ ಸರ್ವೆ ನಡೆಸಲು ನಿರ್ಧರಿಸಲಾಗಿದೆ. ‘ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಂದ ಸರ್ವೆ ಮಾಡಿಸಲಾಗುತ್ತದೆ. ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮೋಟಿವೇಟ್ ಮಾಡಲಾಗುತ್ತದೆ’ ಎಂದು ಡಾ.ರಾಜೇಶ್ ಸುರಗೀಹಳ್ಳಿ ತಿಳಿಸಿದರು.
ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]