SHIVAMOGGA LIVE | 20 JUNE 2023
SHIMOGA : ಒಂದು ಗಂಟೆ ಸುರಿದ ಮಳೆಗೆ ಪುನಃ ಹೊಸಮನೆ ಬಡಾವಣೆಯಲ್ಲಿ ರಾಜ ಕಾಲುವೆ ಉಕ್ಕಿ ಹರಿದಿದೆ. ರಸ್ತೆ ಮೇಲೆ ನೀರು ಹರಿದು, ಮನೆಗಳಿಗೆ ನುಗ್ಗಿದೆ (Flooded). ಇದರಿಂದ ಮನೆಯಲ್ಲಿದ್ದ ಹಲವು ವಸ್ತುಗಳು ಹಾನಿಗೀಡಾಗಿವೆ.
ಇವತ್ತು ಮಧ್ಯಾಹ್ನ ಶಿವಮೊಗ್ಗದಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಈ ವೇಳೆ ಹೊಸಮನೆ ಬಡಾವಣೆಯಲ್ಲಿ ಹಾದು ಹೋಗುವ ರಾಜ ಕಾಲುವೆ ತುಂಬಿ ಹರಿದಿದೆ (Flooded). ಇದರಿಂದ ಚರಂಡಿ ನೀರು ರಾಜಕಾಲುವೆಗೆ ಸೇರದೆ ರಸ್ತೆಗೆ ಬಂದಿದೆ. ಕೆಲವೆ ಹೊತ್ತಿನಲ್ಲಿ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿದೆ. ಮನೆ ಸದಸ್ಯರು ನೀರನ್ನು ಹೊರಗೆ ಹಾಕುವಷ್ಟರಲ್ಲಿ ಹೈರಾಣಾದರು.
ಬಡಾವಣೆಯಲ್ಲಿರುವ ಸುಮಾರು 80 ಮನೆಗಳಿಗೆ ನೀರು ನುಗ್ಗಿದೆ ಎಂದು ಹೇಳಲಾಗುತ್ತಿದೆ. ಮನೆಯಲ್ಲಿದ್ದ ದಿನಸಿ ಸೇರಿದಂತೆ ಹಲವು ವಸ್ತುಗಳು ನೀರಿನಿಂದ ಹಾನಿಗೀಡಾಗಿವೆ. ಇನ್ನು, ವಿಚಾರ ತಿಳಿದು ಕಾಂಗ್ರೆಸ್ ನಾಯಕ ಕೆ.ರಂಗನಾಥ್, ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜೆಸಿಬಿ ಮೂಲಕ ರಾಜ ಕಾಲುವೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದು ಗಂಟೆ ಸುರಿದ ಮಳೆ, ವಿವಿಧೆಡೆ ರಸ್ತೆಗಳು ಜಲಾವೃತ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
ಪ್ರತಿ ಬಾರಿ ನಗರದಲ್ಲಿ ಜೋರು ಮಳೆಯಾದಾಗ ಹೊಸಮನೆ ಬಡಾವಣೆಯಲ್ಲಿ ರಾಜಕಾಲುವೆ ಉಕ್ಕಿ ಹರಿದು ಮನೆಗಳಿಗೆ ಕೊಳಚೆ ನೀರು ನುಗ್ಗುತ್ತಿದೆ. ಈ ಬಾರಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸಿದ್ದು ಈ ಸಮಸ್ಯೆ ಉದ್ಭವಿಸಲ್ಲ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200