ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್‌ಗಳು ಬಂದ್‌, ಕಾರಣವೇನು?

ಶಿವಮೊಗ್ಗ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ವಾಣಿಜ್ಯ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಬಿಸಿ ಈಗ ಶಿವಮೊಗ್ಗದ ಹೋಟೆಲ್ (hotels in Shivamogga) ಉದ್ಯಮಕ್ಕು ತಟ್ಟಿದೆ. ಅನಿಲ ಕೊರತೆಯಿಂದಾಗಿ ಶಿವಮೊಗ್ಗದ ಬಹುತೇಕ ಹೊಟೇಲ್‌ಗಳು ಗುರುವಾರದಿಂದ ಬಂದ್‌ ಆಗಲಿವೆ.

ಈ ಹಿನ್ನೆಲೆ ಮಥುರಾ ಪ್ಯಾರಡೈಸ್‌ನಲ್ಲಿ ಶಿವಮೊಗ್ಗ ಜಿಲ್ಲಾ ಹೋಟೆಲ್ ಮಾಲೀಕರ ಸಂಘವು ಜಿಲ್ಲಾಧ್ಯಕ್ಷ ಶಂಕರನಾರಾಯಣ ಹೊಳ್ಳ ಅವರ ನೇತೃತ್ವದಲ್ಲಿ ಈ ಸಭೆ ನಡೆಸಲಾಯಿತು.

Hotel-Owners-Association-Meeting-at-Mathura-Paradise

ನಾಳೆಯಿಂದ ಬಹುತೇಕ ಹೊಟೇಲ್‌ ಬಂದ್

ವಾಣಿಜ್ಯ ಅನಿಲದ ತೀವ್ರ ಕೊರತೆ ಎದುರಾಗಿರುವುದರಿಂದ ನಾಳೆಯಿಂದ ಹೋಟೆಲ್‌ಗಳನ್ನು ಯಾವ ರೀತಿ ನಡೆಸಬೇಕು ಎಂಬ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಅನಿಲ ಲಭ್ಯವಿಲ್ಲದ ಕಾರಣ ಬಹುತೇಕ ಹೋಟೆಲ್‌ಗಳನ್ನು ಬಂದ್ ಮಾಡಲು ಸಂಘದ ಪ್ರಮುಖರು ನಿರ್ಧರಿಸಿದ್ದಾರೆ.

Hotel-Owners-Association-Meeting-at-Mathura-Paradise

ಸಂಘದ ಅಧ್ಯಕ್ಷರು ಹೇಳಿದ್ದೇನು?

ಇನ್ನು, ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ, ಖಾಸಗಿ ಕಂಪನಿಗಳು ಗ್ಯಾಸ್ ಪೂರೈಕೆಯನ್ನು ಸ್ಥಗಿತಗೊಳಿಸಿವೆ ಹಾಗೂ ಏಜೆನ್ಸಿಗಳಲ್ಲಿಯೂ ಸಿಲಿಂಡರ್‌ಗಳ ಲಭ್ಯತೆ ತೀರಾ ಕಡಿಮೆಯಾಗಿದೆ. ಶೇ. 98 ರಷ್ಟು ಹೋಟೆಲ್‌ಗಳು ಗ್ಯಾಸ್ ಮೇಲೆ ಅವಲಂಬಿತವಾಗಿವೆ. ಅಡುಗೆ ಅನಿಲವಿಲ್ಲದೆ ಹೋಟೆಲ್ ನಡೆಸುವುದು ಅಸಾಧ್ಯ. ಈ ಸಮಸ್ಯೆಯಿಂದಾಗಿ ಹೋಟೆಲ್ ಕಾರ್ಮಿಕರ ವೇತನ ಪಾವತಿಗೂ ಸಂಚಕಾರ ಬಂದಿದೆ. ಉದ್ಯಮ ಮುಂದುವರಿಸುವುದೆ ಸವಾಲಾಗಿದೆ ಎಂದರು.

Hotel-Owners-Association-Meeting-at-Mathura-Paradise

ಗ್ಯಾಸ್ ಕೊರತೆಯಿಂದಾಗಿ ಗುರುವಾರದಿಂದ ಶಿವಮೊಗ್ಗದ ಶೇ.90 ರಷ್ಟು ಹೋಟೆಲ್‌ಗಳು ಕಾರ್ಯಾಚರಣೆ ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಪರ್ಯಾಯವಾಗಿ ಕಟ್ಟಿಗೆ ಒಲೆ ಅಥವಾ ವಿದ್ಯುತ್ ಒಲೆ ಬಳಸಲು ಸಾಧ್ಯವಿರುವ ಕೆಲವೇ ಕೆಲವು ಹೋಟೆಲ್‌ಗಳು ಮಾತ್ರ ಸೀಮಿತ ತಿಂಡಿ ತಿನಿಸುಗಳೊಂದಿಗೆ ಕಾರ್ಯನಿರ್ವಹಿಸಲಿವೆ. ಆಸ್ಪತ್ರೆಗೆ ಬರುವವರು ಹಾಗೂ ಹೊರಗಿನಿಂದ ಬರುವ ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗಲಿದೆ ಎಂದು ತಿಳಿಸಿದರು.

ಶೇ.50ರಷ್ಟು ಗ್ಯಾಸ್‌ ಪೂರೈಕೆ ಮಾಡಿ

ರಾಜ್ಯ ಹೋಟೆಲ್ ಮಾಲೀಕರ ಸಂಘದ ವಲಯ ಕಾರ್ಯದರ್ಶಿ ಉದಯ್ ಕಂಡಂಬ ಮಾತನಾಡಿ, ಇಂಧನ ಪೂರೈಕೆ ಸ್ಥಗಿತಗೊಂಡರೆ ಲಕ್ಷಾಂತರ ಕಾರ್ಮಿಕರ ಬದುಕು ದುಸ್ತರವಾಗಲಿದೆ ಮತ್ತು ಹೋಟೆಲ್‌ಗಳನ್ನು ನಂಬಿರುವ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಊಟದ ಸಮಸ್ಯೆ ಎದುರಾಗಲಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕನಿಷ್ಠ ಶೇ.50 ರಷ್ಟಾದರೂ ಗ್ಯಾಸ್ ಪೂರೈಕೆಗೆ ವ್ಯವಸ್ಥೆ ಮಾಡಿ ಉದ್ಯಮ ಹಾಗೂ ಗ್ರಾಹಕರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.

Hotel-Owners-Association-Meeting-at-Mathura-Paradise - Shubham Hotel owner uday

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಗೋಪಿನಾಥ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಗೋಪಿ ಸರ್ಕಲ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್‌, ಸೌದೆ ಒಲೆ ಅಡುಗೆ

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 11, 2026 at 1:41 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 11, 2026

Leave a Comment