SHIVAMOGGA LIVE NEWS | THEFT | 30 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗೋಪಾಳದ ಕೊನೇ ಬಸ್ ನಿಲ್ದಾಣ ಸಮೀಪದ ಮನೆಯೊಂದರಲ್ಲಿ ಬಂಗಾರದ ನೆಕ್ಲಸ್ ಮತ್ತು ನಗದು ಹಣ ಕಳವಾಗಿದೆ. ಹೋಟೆಲ್ ಸಪ್ಲೆಯರ್ ಮೇಲೆ ಅನುಮಾನ ವ್ಯಕ್ತವಾಗಿದ್ದು ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಗೋಪಾಳದ ಎಲ್.ಮಂಜುನಾಥ ಅವರು ಹೋಟೆಲ್ ನಡೆಸುತ್ತಿದ್ದಾರೆ. ಸೊರಬ ತಾಲೂಕಿನ ಬೆನ್ನೂರು ಗ್ರಾಮದ ಮೂರ್ತಿ ಎಂಬಾತ ಸಪ್ಲೆಯರ್ ಆಗಿದ್ದ. ಆತ ಮಂಜುನಾಥ ಅವರ ಮನೆಯಲ್ಲೇ ವಾಸವಿದ್ದ. ಏ.24ರಂದು ರಾತ್ರಿ ಮಂಜುನಾಥ ಅವರ ಪತ್ನಿ ಬೆಡ್ರೂಮ್ ನಲ್ಲಿದ್ದ ಬೀರುವಿನ ಲಾಕರ್ನಲ್ಲಿ ಬಂಗಾರದ ನೆಕ್ಲಸ್ ಮತ್ತು 19,500 ರೂ. ನಗದು ಇಟ್ಟಿದ್ದರು.
ಮರುದಿನ ಬೆಳಗ್ಗೆ ನೋಡಿದಾಗ ಕಳವು ಆಗಿರುವುದು ಬೆಳಕಿಗೆಬಂದಿದೆ. ಅದೇ ದಿನ ಮೂರ್ತಿ ಮನೆಯವರಿಗೆ ಹುಷಾರಿಲ್ಲ ಎಂದು ಹೇಳಿ ಬೆಳಗ್ಗೆಯೇ ಊರಿಗೆ ತೆರಳಿದ್ದು ವಾಪಸ್ ಬಂದಿಲ್ಲ. ಹಾಗಾಗಿ ಆತನೇ ಕಳವು ಮಾಡಿದ್ದಾನೆಂದು ಮಂಜುನಾಥ ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ – ಕರೆಂಟ್ ಶಾಕ್, ನಾಲ್ಕು ವರ್ಷದ ಬಾಲಕಿ ಸಾವು, ಹೇಗಾಯ್ತು ಘಟನೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






