ಗೋಪಾಳದಲ್ಲಿ ಮನೆ ಕಳ್ಳತನ, ಹೊಟೇಲ್ ಸಪ್ಲಯರ್ ಮೇಲೆ ಅನುಮಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | THEFT | 30 ಏಪ್ರಿಲ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗೋಪಾಳದ ಕೊನೇ ಬಸ್ ನಿಲ್ದಾಣ ಸಮೀಪದ ಮನೆಯೊಂದರಲ್ಲಿ ಬಂಗಾರದ ನೆಕ್ಲಸ್ ಮತ್ತು ನಗದು ಹಣ ಕಳವಾಗಿದೆ. ಹೋಟೆಲ್ ಸಪ್ಲೆಯರ್ ಮೇಲೆ ಅನುಮಾನ ವ್ಯಕ್ತವಾಗಿದ್ದು ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಗೋಪಾಳದ ಎಲ್.ಮಂಜುನಾಥ ಅವರು ಹೋಟೆಲ್ ನಡೆಸುತ್ತಿದ್ದಾರೆ. ಸೊರಬ ತಾಲೂಕಿನ ಬೆನ್ನೂರು ಗ್ರಾಮದ ಮೂರ್ತಿ ಎಂಬಾತ ಸಪ್ಲೆಯರ್ ಆಗಿದ್ದ. ಆತ ಮಂಜುನಾಥ ಅವರ ಮನೆಯಲ್ಲೇ ವಾಸವಿದ್ದ. ಏ.24ರಂದು ರಾತ್ರಿ ಮಂಜುನಾಥ ಅವರ ಪತ್ನಿ ಬೆಡ್‌ರೂಮ್ ನಲ್ಲಿದ್ದ ಬೀರುವಿನ ಲಾಕರ್‌ನಲ್ಲಿ ಬಂಗಾರದ ನೆಕ್ಲಸ್ ಮತ್ತು 19,500 ರೂ. ನಗದು ಇಟ್ಟಿದ್ದರು.

ಮರುದಿನ ಬೆಳಗ್ಗೆ ನೋಡಿದಾಗ ಕಳವು ಆಗಿರುವುದು ಬೆಳಕಿಗೆಬಂದಿದೆ. ಅದೇ ದಿನ ಮೂರ್ತಿ ಮನೆಯವರಿಗೆ ಹುಷಾರಿಲ್ಲ ಎಂದು ಹೇಳಿ ಬೆಳಗ್ಗೆಯೇ ಊರಿಗೆ ತೆರಳಿದ್ದು ವಾಪಸ್ ಬಂದಿಲ್ಲ. ಹಾಗಾಗಿ ಆತನೇ ಕಳವು ಮಾಡಿದ್ದಾನೆಂದು ಮಂಜುನಾಥ ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ – ಕರೆಂಟ್ ಶಾಕ್, ನಾಲ್ಕು ವರ್ಷದ ಬಾಲಕಿ ಸಾವು, ಹೇಗಾಯ್ತು ಘಟನೆ?

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment