ಶಿವಮೊಗ್ಗ: ವಸತಿ ಇಲಾಖೆಯಲ್ಲಿ (Housing) ಭ್ರಷ್ಟಾಚಾರವಾಗಿದೆ ಎಂದು ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದರು. ಇದರ ಆಡಿಯೋ ಬಹಿರಂಗವಾಗಿದ್ದು, ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಇದರ ಬೆನ್ನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸಿವುಂತೆ ಸಲಹೆ ನೀಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಸತಿ ಇಲಾಖೆಯಲ್ಲಿನ ಸಮಸ್ಯೆ ಕುರಿತು ಹಿರಿಯ ಸದಸ್ಯರೊಬ್ಬರು ಆಪಾದನೆ ಮಾಡಿದ್ದಾರೆ. ಈ ಹಿನ್ನೆಲೆ ಸಂಬಂಧಿಸಿದ ಸಚಿವರು ರಾಜೀನಾಮೆ ನೀಡಿ, ತನಿಖೆ ಎದುರಿಸುವುದು ಸೂಕ್ತ ಎಂದರು. ಎಂದು ತಿಳಿಸಿದ್ದಾರೆ.
ಈ ಹಿಂದೆ ಹಲವು ಹಗರಣಗಳಾದಾಗ ಸಚಿವರುಗಳು ರಾಜೀನಾಮೆ ನೀಡಿದ್ದರು. ಅಂತೆಯೇ ಅಪಾದನೆ ಕೇಳಿ ಬಂದಿರುವುದರಿಂದ ಸಚಿವರು ರಾಜೀನಾಮೆ ನೀಡಬೇಕು. ತನಿಖೆ ಬಳಿಕ ಪುನಃ ಸಚಿವರಾಗುವುದು ಸೂಕ್ತ ಎಂದರು.
ಇದನ್ನೂ ಓದಿ » ದುಬಾರಿಯಾಯ್ತು ಗೊಬ್ಬರ, ಯುವ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಸಾಲ ಮನ್ನಾಗೆ ಒತ್ತಾಯ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200