ರೈತರಿಗೆ ಗುಡ್ ನ್ಯೂಸ್, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಆ್ಯಪ್ ಬಿಡುಗಡೆ, ಇದನ್ನು ಬಳಸೋದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 DECEMBER 2022

ಶಿವಮೊಗ್ಗ : ಗ್ರಾಹಕರ ಅನುಕೂಲಕ್ಕಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ (DCC BANK) ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ. ಇನ್ಮುಂದೆ ಇದರ ಮೂಲಕವೆ ರೈತರು ತಮ್ಮ ಖಾತೆಯಲ್ಲಿರುವ ಹಣ, ಹಿಂದಿನ ವ್ಯವಹಾರದ ಕುರಿತು ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ.

Shimoga Nanjappa Hospital

ನಬಾರ್ಡ್ ಪ್ರಾದೇಶಿಕ ಕಚೇರಿಯ ಮುಖ್ಯ ಮಹಾ ಪ್ರಬಂಧಕ ಟಿ.ರಮೇಶ್ ಅವರು ಡಿಸಿಸಿ ಬ್ಯಾಂಕ್ ಆವರಣದಲ್ಲಿ ಆ್ಯಪ್ ಬಿಡುಗಡೆ ಮಾಡಿದರು.

ಆ್ಯಪ್ ಮೊಬೈಲ್ ಗೆ ಹಾಕಿಕೊಳ್ಳುವುದು ಹೇಗೆ?

ಡಿಸಿಸಿ ಬ್ಯಾಂಕ್ ಆ್ಯಪ್ ಮೊಬೈಲ್ ಗೆ ಡೌನ್ ಲೋಡ್ ಮಾಡಿಕೊಳ್ಳಬೇಕು. GOOGLE PLAY STOREನಲ್ಲಿ Shimoga DCCB – Mobile Banking ಎಂದು ಟೈಪ್ ಮಾಡಬೇಕು. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಲೋಗೋ ಜೊತೆಗೆ ಆ್ಯಪ್ ಕಾಣಿಸಲಿದೆ. ಅದನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು.

ಡಿಸಿಸಿ ಬ್ಯಾಂಕಿನಲ್ಲಿ ಗ್ರಾಹಕರು ರಿಜಿಸ್ಟರ್ ಮಾಡಿರುವ ಮೊಬೈಲ್ ನಂಬರನ್ನು ಆ್ಯಪ್ನಲ್ಲಿ ಎಂಟರ್ ಮಾಡಬೇಕು. OTP PASSWORD ಬರಲಿದೆ. ಅದನ್ನು ಆ್ಯಪ್ನಲ್ಲಿ ಎಂಟರ್ ಮಾಡಬೇಕು. ಬಳಿಕ ಆ್ಯಪ್ ಸುರಕ್ಷತೆಗಾಗಿ ನಾಲ್ಕು ನಂಬರಿನ ಸೀಕ್ರೆಟ್ ಪಾಸ್ ವರ್ಡ್ ಎಂಟರ್ ಮಾಡಿಕೊಂಡು, ಲಾಗಿನ್ ಆಗಬಹುದು.

ಹೋಮ್ ಸ್ಕ್ರೀನ್ ನಲ್ಲಿ ಅಕೌಂಡ್ ಮಾಹಿತಿ, ಎಫ್.ಡಿ / ಆರ್.ಡಿ ಖಾತೆ, ಎಂ ಪಾಸ್ ಬುಕ್ ಸೇರಿದಂತೆ 7 OPTIONS ಇದೆ.

ಅಕೌಂಟ್ ಬ್ಯಾಲೆನ್ಸ್ ಪರಿಶೀಲನೆ

ಡಿಸಿಸಿ ಬ್ಯಾಂಕ್ ಆ್ಯಪ್ ಮೊಬೈಲಿನಲ್ಲೇ ಅಕೌಂಟ್ ಬ್ಯಾಲೆನ್ಸ್ ಪರಿಶೀಲಿಸಬಹುದು. ಆ್ಯಪ್ನ ಹೋಂ ಸ್ಕ್ರೀನಿನಲ್ಲಿ ACCOUNT DETAILS ಮೇಲೆ ಕ್ಲಿಕ್ ಮಾಡಬೇಕು. ಅದರಲ್ಲಿ SAVINGS ACCOUNT, CURRENT ACCOUNT, DEPOSIT ACCOUNT, LOAN ACCOUNT ತೋರಿಸುತ್ತದೆ. ಗ್ರಾಹಕರು ತಮ್ಮ ಖಾತೆಯನ್ನು ಇಲ್ಲಿ ಪರಿಶೀಲಿಸಬಹದು. ಬ್ಯಾಂಕ್ ಬ್ಯಾಲೆನ್ಸ್, ಲೋನ್ ವಿವರಗಳು ಇದರಲ್ಲಿ ಲಭ್ಯವಿದೆ.

ಮುಂದೆ ಮತ್ತಷ್ಟು ಸೌಲಭ್ಯ

ಉದ್ಘಾಟನೆ ಬಳಿಕ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಅವರು, ‘ಮೊದಲ ಹಂತದಲ್ಲಿ ನಾನ್ ಫಂಡ್ ಸೇವೆಗಳನ್ನು ಮಾತ್ರ ಒದಗಿಸಲಾಗುತ್ತಿದೆ. ಗ್ರಾಹಕರ ಖಾತೆಗಳ ಬ್ಯಾಲೆನ್ಸ್, ಮಿನಿ ಪಾಸ್ ಬುಕ್, ಬ್ಯಾಂಕಿನ ಸಾಮಾನ್ಯ ಮಾಹಿತಿಗಳು, ಪಾಸಿಟೀವ್ ಪೇ ಸಿಸ್ಟ್ಂ ನಡಿಯಲ್ಲಿ ಗ್ರಾಹಕರು ನೀಡಿದ ಚೆಕ್ ವಿವರಗಳನ್ನು ಬ್ಯಾಂಕಿಗೆ ಒದಗಿಸಬಹುದಾಗಿದೆ. ಮುಂದೆ ಫಂಡ್ ಆಧಾರಿತ ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ತಿಳಿಸಿದರು.

Shimoga Nanjappa Hospital

ಓಟಿಪಿ ಬಗ್ಗೆ ಇರಲಿ ಎಚ್ಚರ

ಡಿಸಿಸಿ ಬ್ಯಾಂಕ್ ಮೊಬೈಲ್ ಆ್ಯಪ್ ಬಳಕೆ ಮಾಡುವವರು ಓಟಿಪಿ ಕುರಿತು ಎಚ್ಚರ ವಹಿಸಬೇಕಿದೆ. ‘ಗ್ರಾಹಕರು ತಮ್ಮ ಓಟಿಪಿ, ಪಾಸ್ ವರ್ಡ್, ಎಂಪಿನ್ ಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಈ ಕುರಿತು ಗೌಪ್ಯತೆ ಕಾಪಾಡಬೇಕು’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ತಿಳಿಸಿದರು.

ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್

ಮೊಬೈಲ್ ಆ್ಯಪ್ ಉದ್ಘಾಟನೆ ವೇಳೆ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಎಲ್.ಷಡಾಕ್ಷರಿ, ಮುಖ್ಯ ಕಾರ್ಯನಿರ್ವಾಹಕ ನಾಗೇಶ್ ಎಸ್.ಡೋಂಗರೆ, ಸಹಕಾರ ಸಂಘಗಳ ಉಪ ನಿಬಂಧಕ ಜಿ.ವಾಸುದೇವ, ನಬಾರ್ಡ್ ಜಿಲ್ಲಾ ಅಧಿಕಾರಿ ರವಿ ಸೇರಿದಂತೆ ಹಲವರು ಇದ್ದರು.

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 15, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment