ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 AUGUST 2023
SHIMOGA : ಮಹಿಳೆಯರಿಗೆ ಉಚಿತ ಬಸ್ (Free Bus) ಪ್ರಯಾಣದ ಶಕ್ತಿ ಯೋಜನೆಗೆ (Shakti) ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆ ಜಾರಿಯಾದಾಗಿನಿಂದ ಈವರೆಗೆ ಶಿವಮೊಗ್ಗ ವಿಭಾಗದಲ್ಲಿ 53 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ.
ಜೂ.11ರಂದು ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತು. ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಯಿತು. ಯೋಜನೆ ಜಾರಿ ಬೆನ್ನಿಗೆ ಶಿವಮೊಗ್ಗ ವಿಭಾಗದ (KSRTC) ವ್ಯಾಪ್ತಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.
53 ಲಕ್ಷ ಮಹಿಳಾ ಪ್ರಯಾಣಿಕರು
ಯೋಜನೆ ಜಾರಿಯಾದ ಬಳಿಕ ಜುಲೈ ತಿಂಗಳಲ್ಲಿ 24,01,146 ಮಹಿಳೆಯರು , ಆಗಸ್ಟ್ ತಿಂಗಳಲ್ಲಿ 22ರವರೆಗೆ 16,64,330 ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ. ಇದರ ಒಟ್ಟು ವೆಚ್ಚ 17,34,40,923 ರೂ. ಆಗಿದೆ. ಈ ವೆಚ್ಚವನ್ನು ಸರ್ಕಾರ ಸಾರಿಗೆ ನಿಗಮಕ್ಕೆ ಭರಿಸಬೇಕಿದೆ.

[su_quote cite=”ವಿಜಯಕುಮಾರ್, ವಿಭಾಗೀಯ ನಿಯಂತ್ರಕರು, ಕೆಎಸ್ಆರ್ಟಿಸಿ ಶಿವಮೊಗ್ಗ ವಿಭಾಗ“]ಯೋಜನೆ ಅನುಷ್ಟಾನದ ನಂತರ ನೂಕು ನುಗ್ಗಲು, ಅಹಿತಕರ ಘಟನೆ ತಪ್ಪಿಸಲು ಸೂಪರ್ವೈಸರ್ಗಳನ್ನು ನಿಯೋಜಿಸಲಾಗಿದೆ. ಜಾತ್ರೆ, ಹಬ್ಬದ ದಿನಗಳನ್ನು ಗುರುತಿಸಿ ಪ್ರಯಾಣಿಕರ ಸಂದಣಿಗೆ ಅನುಗುಣವಾಗಿ ಘಟಕದಿಂದ ಹೆಚ್ಚುವರಿ ಬಸ್ಸುಗಳ ತ್ವರಿತ ನಿಯೋಜನೆ, ಹೆಚ್ಚುವರಿ ಸಿಬ್ಬಂದಿಗಳ ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.[/su_quote]
ಉಚಿತವಾಗಿ ಬಸ್ಗಳಲ್ಲಿ ಪ್ರಯಾಣಿಸಲು ಮಹಿಳೆಯರಿಗೆ ಶಕ್ತಿ ಕಾರ್ಡ್ ನೀಡಲು ಸರ್ಕಾರ ಯೋಜಿಸಿದೆ. ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವವರೆಗೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿತರಿಸಿರುವ ಯಾವುದಾದರು ಗುರುತಿನ ಚೀಟಿಯನ್ನು ಕಂಡಕ್ಟರ್ಗೆ ತೋರಿಸಬೇಕು. ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಶಕ್ತಿ ಯೋಜನೆ ಅನ್ವಯವಾಗಲಿದೆ.
ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್ ನ್ಯೂಸ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















