ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020
ಹಿಂದಿನ ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿ ಅವರು ಕಾನೂನು ಬಾಹಿರವಾಗಿ ತಮ್ಮ ಜಮೀನನ್ನು ಪರಭಾರೆ ಮಾಡಿದ್ದಾರೆ ಎಂದು ಆರೋಪಿಸಿ ಹುಣಸೋಡು ಗ್ರಾಮದ ಕುಟುಂಬವೊಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಹನುಮಂತಪ್ಪ, ಹಾಲಮ್ಮ ಎಂಬುವವರ ಕುಟುಂಬದವರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡ ಜಮೀನು ಪರಭಾರೆ ನಿಷೇಧ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಕುಟುಂಬಕ್ಕೆ ಸೇರಬೇಕಾದ ಜಮೀನನ್ನು ಊರಿಗೆ ಸಂಬಂಧಿಸದ ವ್ಯಕ್ತಿಯೊಬ್ಬರಿಗೆ ಪರಭಾರೆ ಮಾಡಲಾಗಿದೆ. ಇದು ಕಾನೂನು ಬಾಹಿರವಾಗಿದೆ ಆಕ್ರೋಶ ವ್ಯಕ್ತಪಡಿಸಿದರು.
ಪಿಡಿಒ ಸೇರಿದಂತೆ ಹಲವು ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಜಮೀನು ತಮಗೆ ಸೇರಿದ್ದು ಎಂದು ತಿಳಿದು ಬಂದಿದೆ. ಆದರೆ ಹಿಂದಿನ ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿಗಳು ತಮ್ಮ ಪಿಡಿಒ ನೀಡಿದ ವರದಿಯನ್ನು ಪರಿಗಣಿಸದೆ, ಜಿಲ್ಲಾಧಿಕಾರಿ ನ್ಯಾಯಾಲಯದ ತೀರ್ಪು ಪ್ರಕರಟವಾಗುವ ಮೊದಲೇ ಪರಭಾರ ಮಾಡಲಾಗಿದೆ ಎಂದು ಆರೋಪಿಸಿದರು.
ಸತೀಶ್, ಗಜೇಂದ್ರ, ನಾಗರಾಜ್, ಶಿವರಾಜ್, ಸುರೇಶ್, ಹನುಮಂತ, ರಾಜೇಂದ್ರಪ್ರಸಾದ್, ಪ್ರಶಾಂತ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200