ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕಡಿಮೆ ದರದಲ್ಲಿ ಊಟ, ತಿಂಡಿ ಪೂರೈಸಬೇಕಿದ್ದ ಇಂದಿರಾ ಕ್ಯಾಂಟೀನ್ ಇಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಆಗಿ ಪರಿವರ್ತನೆಯಾಗಿದೆ. ನಿರ್ಮಾಣವಾಗಿ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್ (Indira Canteen) ಕಟ್ಟಡ ಕುಡುಕರ ಪಾಲಿನ ಸ್ವರ್ಗವಾಗಿದ್ದು, ಅಕ್ರಮ ಚಟುವಟಿಕೆಯ ಅಡ್ಡೆಯಾಗಿದೆ.
ಇದನ್ನೂ ಓದಿ » ಜನರಿಂದ ತಪ್ಪಿಸಿಕೊಳ್ಳುವಾಗ ಗುಂಡಿಗೆ ಬಿದ್ದ ಕಳ್ಳ, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಗ್ರಾಮಸ್ಥರು
ಶಿವಮೊಗ್ಗದ ವಿದ್ಯಾನಗರ ಮುಖ್ಯ ರಸ್ತೆಯಲ್ಲಿ ಈಚೆಗೆ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಈತನಕ ಕ್ಯಾಂಟೀನ್ ಉದ್ಘಾಟನೆಯಾಗಿಲ್ಲ. ಹಾಗಾಗಿ ಕಟ್ಟಡ ಅನಾಥವಾಗಿ ಉಳಿದುಕೊಂಡಿದೆ.

ಕುಡುಕರ ಅಡ್ಡೆಯಾದ ಇಂದಿರಾ ಕ್ಯಾಂಟೀನ್
ವಿದ್ಯಾನಗರದ ಇಂದಿರಾ ಕ್ಯಾಂಟೀನ್ ಕುಡುಕರ ಅಡ್ಡೆಯಾಗಿದೆ. ಮದ್ಯದ ಅಂಗಡಿಯಿಂದ ಮದ್ಯ ತಂದು ಇಂದಿರಾ ಕ್ಯಾಂಟೀನ್ ಕಟ್ಟಡದೊಳಗೆ ಕುಡಿಯುತ್ತಿದ್ದಾರೆ. ಬಿಯರ್ ಬಾಟಲಿಗಳು, ಮದ್ಯದ ಪೌಚ್ಗಳನ್ನು ಅಲ್ಲಿಯೇ ಬಿಸಾಡಿ ಹೋಗುತ್ತಿದ್ದಾರೆ. ಹಾಗಾಗಿ ಇಂದಿರಾ ಕ್ಯಾಂಟೀನ್ (Indira Canteen) ಒಳಾಂಗಣದಲ್ಲಿ ರಾಶಿ ರಾಶಿ ಮದ್ಯದ ಪೌಚುಗಳು ಬಿದ್ದಿವೆ.

ಹಗಲು, ರಾತ್ರಿ ಮದ್ಯ ಸೇವಿಸುತ್ತಾರೆ
ಇಂದಿರಾ ಕ್ಯಾಂಟೀನ್ 24 ಗಂಟೆಯ ಬಾರ್ ಆಗಿ ಪರಿವರ್ತನೆಯಾಗಿದೆ. ಹಗಲಲ್ಲು ಇಲ್ಲಿ ಕುಡುಕರ ಗುಂಪು ನೆರದಿರುತ್ತದೆ. ರಾತ್ರಿ ಹೊತ್ತಲು ಮದ್ಯ ಸೇವಿಸುತ್ತಿರುತ್ತಾರೆ. ಸಿಗರೇಟು ಹೊಗೆ ಇರುತ್ತೆ. ಗಾಂಜಾ ಸೇದುತ್ತಾರೆ ಅಂತಲು ಕೆಲವರು ಹೇಳುತ್ತಾರೆ ಎಂದು ಸ್ಥಳೀಯರೊಬ್ಬರು ದೂರುತ್ತಾರೆ. ಇಂದಿರಾ ಕ್ಯಾಂಟೀನ್ ಅಕ್ರಮದ ಅಡ್ಡಿಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ » ತಣ್ಣಗಾಯ್ತು ಶಿವಮೊಗ್ಗ ಈದ್ಗಾ ಮೈದಾನ ವಿವಾದ, ಪುನಃ ವಾಹನ ಪಾರ್ಕಿಂಗ್ಗೆ ಅವಕಾಶ, ಯಾವಾಗ?
ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ (Indira Canteen) ಯೋಜನೆ ಈ ರೀತಿ ದುರ್ಬಳಕೆ ಆಗುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಇನ್ನು, ಈ ಇಂದಿರಾ ಕ್ಯಾಂಟೀನ್ ಅನ್ನು ಶೀಘ್ರ ಉದ್ಘಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.



LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






