
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನ್ಯಾಯಮೂರ್ತಿ ಸದಾಶಿವ ಅವರ ಆಯೋಗದ ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಭಾನುಪ್ರಸಾದ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ದೀರ್ಘಕಾಲಿಕ ರಾಜಕೀಯ ಹೋರಾಟವಾಗಿ ಮಾರ್ಪಟ್ಟಿದೆ. ಯಾವುದೇ ಅಡ್ಡದಾರಿಗಳು ಇಲ್ಲಿ ಇಲ್ಲ. ರಾಜ್ಯ ಸರ್ಕಾರ ಈ ವರದಿಯನ್ನು ಅಂಗೀಕರಿಸಿ ಜಾರಿಗೆ ತರಬೇಕು. ಇಲ್ಲದಿದ್ದರೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಸಜ್ಜಾಗಿವೆ ಎಂದು ಎಚ್ಚರಿಸಿದರು.

ಕರ್ನಾಟಕದ ಅರಣ್ಯ ಸರ್ಕಾರಿ ಅಕ್ರಮ ಗೋಮಾಳ ಮತ್ತಿತರ ಜಮೀನುಗಳನ್ನು ದಲಿತರಿಗೆ ಹಂಚಿಕೆ ಮಾಡಬೇಕು. ತೋಟಿ, ತಳವಾರಿಕೆ, ಇನಾಂತ್ತಿ ಜಮೀನುಗಳನ್ನು ಮರು ಮಂಜೂರಾತಿ ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು. ಭೂಸುಧಾರಣಾ ಸುಗ್ರಿವಾಜ್ಞೆ ಹಿಂದಕ್ಕೆ ಪಡೆಯಬೇಕು. ಸರ್ಕಾರಿ ವಲಯಗಳನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಬಳಿಕ ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಶ್ರೀಧರ್, ಮನೋಜ್, ವೆಂಕಟೇಶ್, ಮಂಜುನಾಥ್, ಸುನಿಲ್ , ಭಾನುಪ್ರಕಾಶ್ ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






