ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ (Strike) ಆರಂಭಿಸಿದ್ದಾರೆ. ಪೌರ ಕಾರ್ಮಿಕರು ಸೇರಿದಂತೆ ಪಾಲಿಕೆ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು ನಗರದ ಸ್ವಚ್ಛತೆ ಸೇರಿದಂತೆ ಪಾಲಿಕೆಯ ಕರ್ತವ್ಯಕ್ಕೆ ಅಡಚಣೆ ಉಂಟಾಗಲಿದೆ.
[su_quote cite=”ಎನ್.ಗೋವಿಂದ, ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ“]ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ. ಪೌರ ಕಾರ್ಮಿಕರು, ಲೋಡರ್ಗಳು, ಸ್ವಚ್ಛತಾ ಕಾರ್ಮಿಕರು, ಚಾಲಕರು, ಗಾರ್ಡನರ್ಗಳು, ಒಳ ಚರಂಡಿ ಸ್ವಚ್ಛತಾ ಕಾರ್ಮಿಕರು ಹಾಗೂ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30ರಿಂದ ಪಾಲಿಕೆ ಆವರಣದಲ್ಲಿ ಮುಷ್ಕರ ಆರಂಭಿಸಲಿದ್ದೇವೆ.[/su_quote]
[su_divider top=”no” style=”dotted” divider_color=”#cfcdcd” link_color=”#000000″ margin=”10″]

ಪಾಲಿಕೆ ನೌಕರರ ಬೇಡಿಕೆಗಳೇನು?
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಹಾನಗರ ಪಾಲಿಕೆ ನೌಕರರು ಆಗ್ರಹಿಸಿದ್ದಾರೆ. ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಏಳನೆ ವೇತನ ಆಯೋಗದ ಸೌಲಭ್ಯಗಳು, ಕೆಜಿಐಡಿ, ಜಿಪಿಎಫ್ಗಳನ್ನು ಪಾಲಿಕೆ ನೌಕರರಿಗು ವಿಸ್ತರಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಬೇಕು. ಆರೋಗ್ಯ ಯೋಜನೆಗಳನ್ನು ಜಾರಿಗೊಳಿಸಬೇಕು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ » ಸಿಗಂದೂರು ಸೇತುವೆ, ಎರಡನೇ ಹಂತದ ಲೋಡ್ ಟೆಸ್ಟ್ ಶುರು
ಸಾರ್ವಜನಿಕರ ಕೆಲಸಗಳಿಗೆ ಅಡಚಣೆ
ಪಾಲಿಕೆ ನೌಕರರು, ಪೌರ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವುದರಿಂದ ಸಾರ್ವಜನಿಕ ಕೆಲಸಗಳಿಗೆ ಅಡಚಣೆ ನಿಶ್ಚಿತ. ವಿವಿಧ ಕೆಲಸ ಕಾರ್ಯಗಳಿಗೆ ಪಾಲಿಕೆಗೆ ಬರುವ ಸಾರ್ವಜನಿಕರು ಇಂದು ಬರಿಗೈಲಿ ತೆರಳಬೇಕಾಗುತ್ತದೆ. ಇನ್ನು, ನಗರದ ಸ್ವಚ್ಛತಾ ಕಾರ್ಯಕ್ಕು ತೊಡಕಾಗಲಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















