ಶಿವಮೊಗ್ಗ ಸಿಟಿ ಸೆಂಟರ್ ಮಾಲ್’ನಲ್ಲಿ ಭಾವಚಿತ್ರ ಪ್ರದರ್ಶನ ವಿವಾದ, ಬಿಗುವಿನ ವಾತಾವರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ | ಸ್ವಾತಂತ್ರ್ಯೋತ್ಸವದ (INDEPENDENCE) ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ (FREEDOM FIGHTER) ಭಾವಚಿತ್ರಗಳ ಪ್ರದರ್ಶನ ಶಿವಮೊಗ್ಗದಲ್ಲಿ ವಿವಾದಕ್ಕೆ ಕಾರಣವಾಗಿದೆ. ಪರ, ವಿರೋಧ ಪ್ರತಿಭಟನೆ ಹುಟ್ಟುಹಾಕಿದೆ.

Shimoga Nanjappa Hospital

ಶಿವಮೊಗ್ಗದ ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ನಲ್ಲಿ ಇವತ್ತು ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು. ಇದು ಈಗ ವಿವಾದಕ್ಕೆ ಕಾರಣವಾಗಿದೆ.

ವಿವಾದದ ಕಿಡಿ ಹೊತ್ತಿದ್ದು ಹೇಗೆ?

ಸಿಟಿ ಸೆಂಟರ್ ಮಾಲ್’ನ ಒಳ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಪ್ರದರ್ಶನ ಆಯೋಜಿಸಲಾಗಿತ್ತು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಭಬಾಯಿ ಪಟೇಲ್, ವಿನಾಯಕ ದಾಮೋದರ ಸಾರ್ವರ್ಕರ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.

Asif protest at city center

ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ಗೆ ಬಂದಿದ್ದ ಕಾರ್ಪೊರೇಟರ್ ಒಬ್ಬರ ಪತಿ ಮತ್ತು ಸಾಮಾಜಿಕ ಹೋರಾಟಗಾರ ಆಸೀಫ್ ಮತ್ತು ಅವರ ಸಂಗಡಿಗರು, ಆಕ್ಷೇಪ ವ್ಯಕ್ತಪಡಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆಸೀಫ್ ಆಕ್ಷೇಪಕ್ಕೆ ಕಾರಣವೇನು?

ಪ್ರದರ್ಶನದಲ್ಲಿ ಇರುವ ಭಾವಚಿತ್ರಗಳ ಪೈಕಿ ಮುಸ್ಲಿಂ ಹೋರಾಟಗಾರರನ್ನು ಕಡೆಗಣಿಸಲಾಗಿದೆ ಎಂದು ಆಸಿಫ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿ.ಡಿ.ಸಾರ್ವರ್ಕರ್ ಅವರ ಭಾವಚಿತ್ರ ಅಳವಡಿಸಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭ ಸಿಟಿ ಸೆಂಟರ್ ಮಾಲ್ ಅವರಣದಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು.

ವಿಡಿಯೋ ವೈರಲ್ ಬೆನ್ನಿಗೆ ಆಕ್ರೋಶ

ಆಸಿಫ್ ಮತ್ತು ಅವರ ಸಂಗಡಿಗರು ಸಿಟಿ ಸೆಂಟರ್ ಮಾಲ್’ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋ ವೈರಲ್ ಆಗಿದೆ. ವಾಟ್ಸಪ್ ಮತ್ತು ಫೇಸ್’ಬುಕ್’ನಲ್ಲಿ ಹರಿದಾಡುತ್ತಿದೆ. ಅಲ್ಲದೆ ಪರ ವಿರೋಧದ ಚರ್ಚೆಗೂ ಕಾರಣವಾಯಿತು. ಇದರ ಬೆನ್ನಿಗೆ ಸಂಘ ಪರಿವಾರ ಮತ್ತು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಆಸೀಫ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ನಡೆಸಿದ ಬಿಜೆಪಿ, ಸಂಘ ಪರಿವಾರ

ಇನ್ನು, ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರು ಸಿಟಿ ಸೆಂಟರ್ ಮಾಲ್ ಮುಂದೆ ಧರಣಿ ನಡೆಸಿದರು. ಆಸೀಫ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು ಆಗ್ರಹಿಸಿದರು. ಅವರ ಬಂಧನ ಆಗುವವರೆಗೆ ತಾವು ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

Jagadish BJP

ಸಂಭ್ರಮದ ಸ್ವಾತಂತ್ರ್ಯ ಆಚರಣೆ ನಿಲ್ಲಿಸಲು ಹೊರಟಿದ್ದರು. ನಾವು ಇಲ್ಲಿ ಬಂದು ಆಚರಣೆಯನ್ನು ಮುಂದುವರೆಸಿದ್ದೇವೆ. ಪಾಲಿಕೆಯವರು ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಆಸೀಫ್ ಮತ್ತು ತಂಡವನ್ನು ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಜಗದೀಶ್, ಬಿಜೆಪಿ ನಗರಾಧ್ಯಕ್ಷ

ಪಾಲಿಕೆಯಿಂದ ಪೊಲೀಸ್ ದೂರು

ಭಾವಚಿತ್ರ ಪ್ರದರ್ಶನದ ವೇಳೆ ಆಕ್ಷೇಪ ವ್ಯಕ್ತಪಡಿಸಿದ ಆರೋಪ ಸಂಬಂಧ ಆಸೀಫ್ ಮತ್ತು ಆತನ ಸಹಚರರ ವಿರುದ್ಧ ಪಾಲಿಕೆ ವತಿಯಿಂದ ದೂರು ನೀಡಲಾಗಿದೆ. ‘ಐಪಿಸಿ ಸೆಕ್ಷನ್ 341, 353 ಮತ್ತು 34ರ ಅಡಿಯಲ್ಲಿ ಆಸೀಫ್ ಮತ್ತು ಆತನ ಸಂಗಡಿಗರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಬಿಜೆಪಿ ನಗರಾಧ್ಯಕ್ಷ ಜಗದೀಶ್ ಅವರು ತಿಳಿಸಿದ್ದಾರೆ.

Sunitha Annappa Mayor

ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಪ್ರದರ್ಶನ ಮಾಡುವಂತೆ ಸರ್ಕಾರ ಆದೇಶಿಸಿದೆ. ಅದರಂತೆ ನಾವು ಸಿಟಿ ಸೆಂಟರ್ ಮಾಲ್’ನಲ್ಲಿ ಭಾವಚಿತ್ರ ಪ್ರದರ್ಶನ ಮಾಡಿದ್ದೇವೆ. ಅಲಂಕಾರ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆಸೀಫ್ ಮತ್ತು ಆತನ ಸಂಗಡಿಗರು ಬಂದು ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದೂಗಳ ಭಾವಚಿತ್ರ ಮಾತ್ರ ಹಾಕಿದ್ದೀರ. ಮುಸ್ಲಿಂ ಹೋರಾಟಗಾರರ ಭಾವಚಿತ್ರವಿಲ್ಲ ಅಂತಾ ಗಲಾಟೆ ಮಾಡಿದ್ದಾರೆ. ಇದೆಲ್ಲ ಸಿಸಿ ಕ್ಯಾಮರಾದಲ್ಲಿಯು ರೆಕಾರ್ಡ್ ಆಗಿದೆ. ಸುನೀತಾ ಅಣ್ಣಪ್ಪ, ಮೇಯರ್

ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ನಲ್ಲಿ ನಡೆದ ಘಟನೆಯಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಾಗಾಗಿ ಸಿಟಿ ಸೆಂಟರ್ ಮಾಲ್’ನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Independence Day

Independence Day

Independence Day

Independence Day

BJP Protest

ಇದನ್ನೂ ಓದಿ – ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ 8 ವಿಚಾರಗಳಿವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment