| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) 2024 ರ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಬಾರಿ 1000ಕ್ಕೂ ಹೆಚ್ಚು ಅಭ್ಯರ್ಥಿಗಳು ದೇಶದ ಅತ್ಯುನ್ನತ ಸಿವಿಲ್ ಸರ್ವೀಸಸ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಹಲವರು IAS, IPS, IFS ಸೇರಿದಂತೆ ವಿವಿಧ ಕೇಂದ್ರ ಸೇವೆಗಳ ಭಾಗವಾಗಲಿದ್ದಾರೆ.
ಈ ಸಾಧನೆಯ ಪೈಕಿ ಗಮನ ಸೆಳೆಯುತ್ತಿರುವುದು India 4 IAS ಸಂಸ್ಥೆ. ನಿವೃತ್ತ ಹಿರಿಯ ಅಧಿಕಾರಿಗಳಾದ ಡಾ. ಸಿ.ಎಸ್. ಕೆದಾರ್, ಐಎಎಸ್ ಮತ್ತು ಡಾ. ಜಿ.ಎನ್. ಶ್ರೀಕಂಠಯ್ಯ, ಐಎಫ್ಎಸ್ ಅವರ ನೇತೃತ್ವದ ಈ ಸಂಸ್ಥೆಯು 20ಕ್ಕೂ ಹೆಚ್ಚು ರ್ಯಾಂಕ್ಗಳನ್ನ ಈ ವರ್ಷ ಪಡೆದಿದೆ. ವಿಶೇಷವೆಂದರೆ, ಕರ್ನಾಟಕದಿಂದ ಆಯ್ಕೆಯಾಗಿರುವ ಅಭ್ಯರ್ಥಿಗಳಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು India 4 IAS ನಿಂದ ಬಂದಿದ್ದಾರೆ.
ಹಾವೇರಿ ಜಿಲ್ಲೆಯ ಡಾ. ಸಚಿನ್ ಬಿ. ಗುತ್ತೂರ್ ಅವರು ಅಖಿಲ ಭಾರತ 41ನೇ ರ್ಯಾಂಕ್ ಗಳಿಸಿ India 4 IAS ನ ಮೊದಲಿಗರಾಗಿದ್ದಾರೆ. ಕರ್ನಾಟಕದ ಡಾ. ರಂಗ ಮಂಜು (AIR 24) ಅವರು ಕೂಡ ಕರ್ನಾಟಕಕ್ಕೆ ಮೊದಲಿಗರಾಗಿ ಸಾಧನೆಯ ಮಾಡಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ India 4 IAS ಗಣನೀಯ ಸಾಧನೆ ಮಾಡುತ್ತಾ UPSC ಗೆ ತಯಾರಿ ಮಾಡುವ ಯುವಕರಿಗೆ ವಿಶ್ವಾಸದ ಕೇಂದ್ರವಾಗಿ ರೂಪಗೊಂಡಿದೆ. ದೆಹಲಿ, ಹೈದರಾಬಾದ್ ನಂತಹ ಶಿಕ್ಷಣ ಕೇಂದ್ರಗಳಿಂದ ಬಂದ ನಿಪುಣ ಅಧ್ಯಾಪಕರಿಂದ ಬೋಧನೆ, ಆಧುನಿಕ ಹಾಗೂ ಸೂಕ್ತವಾದ ಶೈಕ್ಷಣಿಕ ವಿಧಾನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿರುವ ಸಂಸ್ಥೆ ಇದಾಗಿದೆ.

ಈ ಸಾಧನೆಯ ಮೂಲಕ ಕರ್ನಾಟಕವು ಕೇಂದ್ರ ನಾಗರೀಕ ಸೇವೆಗಳಿಗೆ ಹೆಚ್ಚು ಹೆಚ್ಚು ಅಧಿಕಾರಿಗಳನ್ನು ನೀಡುತ್ತಿರುವ ರಾಜ್ಯಗಳಲ್ಲಿ ಒಂದಾಗಿ ಬೆಳೆದಿದೆ. ಈ ವರ್ಷವೂ ದಿಟ್ಟತೆ, ಶಿಸ್ತು ಮತ್ತು ಸ್ಪಷ್ಟ ಗುರಿಯೊಂದಿಗೆ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳು ಸಾಧನೆ ಮಾಡಿದ್ದು, India 4 IAS ಮಾದರಿಯ ತರಬೇತಿ ಸಂಸ್ಥೆಗಳ ಪಾತ್ರವನ್ನು ಮತ್ತಷ್ಟು ದೃಢಪಡಿಸುತ್ತದೆ.

ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆ 2024–25ರಲ್ಲಿ ಯಶಸ್ಸು ಪಡೆದ ಕರ್ನಾಟಕದ ಅಭ್ಯರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಎಲ್ಲ ಸುದ್ದಿ
ಈ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆಂದು ಹೆಮ್ಮೆಯಿಂದ ತಿಳಿಸುತ್ತೇವೆ. ಜೊತೆಗೆ, ಹಲವು ಹಿರಿಯ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಈ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.
VISIT INDIA4IAS WEBSITE : https://india4ias.com/

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()