ಶಿವಮೊಗ್ಗಕ್ಕೆ ಭಾರತ – ಪಾಕ್‌ ಯುದ್ದದಲ್ಲಿ ಭಾಗಿಯಾದ ಟ್ಯಾಂಕರ್‌, ಸದ್ಯದಲ್ಲೇ ಬರುತ್ತೆ ಫೈಟರ್‌ ವಿಮಾನ, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 AUGUST 2023

SHIMOGA : ನಗರದ ಎಂಆರ್‌ಎಸ್‌ ವೃತ್ತದಲ್ಲಿ ಯುದ್ದ ಟ್ಯಾಂಕರ್‌ (Battle Tanker) ಸ್ಥಾಪನೆಗೆ ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಸೇನೆಯ ಟಿ-55 ಮಾದರಿಯ ಯುದ್ದ ಟ್ಯಾಂಕರ್‌ ಶಿವಮೊಗ್ಗ ತಲುಪಿದೆ.

ಶಿವಮೊಗ್ಗಕ್ಕೆ ಬಂದಿರುವ ಯುದ್ದ ಟ್ಯಾಂಕರ್‌ (Battle Tanker) ಸಾಮಾನ್ಯದ್ದಲ್ಲ. ಯುದ್ದ ಭೂಮಿಯಲ್ಲಿ ಮುಂಚೂಣಿಯಲ್ಲಿ ನಿಂತು ಪಾಕಿಸ್ತಾನ ಸೇನೆ ವಿರುದ್ಧ ಹೋರಾಟ ನಡೆಸಿತ್ತು. ಈಗ ಯುವಕರಲ್ಲಿ ದೇಶಭಕ್ತಿ ಹೆಚ್ಚಿಸಿ, ಸೇನೆಯತ್ತ ಸೆಳೆಯುವ ಉದ್ದೇಶದಿಂದ ಇದನ್ನು ಶಿವಮೊಗ್ಗಕ್ಕೆ ತರಲಾಗುತ್ತಿದೆ. ಎಂಆರ್‌ಎಸ್‌ ವೃತ್ತದಲ್ಲಿ ಇದನ್ನು ಸ್ಥಾಪಿಸುವ ಯೋಜನೆ ಇದೆ.

War-Tanker-for-Shimoga-City.

ಟ್ಯಾಂಕರ್‌ನ ವಿಶೇಷತೆ ಏನು?

POINT 1 jpgಮಹಾರಾಷ್ಟ್ರದ ಪುಣೆಯ ಕಿರ್ಕಿ ಸೇನಾ ಕಂಟೋನ್ಮೆಂಟ್‌ ಬೋರ್ಡ್‌ನಿಂದ ಟಿ-55 ಮಾದರಿ ಯುದ್ದ ಟ್ಯಾಂಕರ್‌ ಅನ್ನು ಶಿವಮೊಗ್ಗಕ್ಕೆ ತರಲಾಗಿದೆ. ಟ್ಯಾಂಕರ್‌ನ ಇಂಜಿನ್‌ ಸೇರಿದಂತೆ ಎಲ್ಲ ಬಗೆಯ ಉಪಕರಣ ತೆಗೆದಿರಸಲಾಗಿದೆ. ಸದ್ಯ ಖಾಲಿ ಇರುವ ಈ ಟ್ಯಾಂಕರ್‌ನ ತೂಕ 36 ಸಾವಿರ ಕೆ.ಜಿ ಇದೆ. ರಷ್ಯಾ ದೇಶದಲ್ಲಿ ಇದನ್ನು ನಿರ್ಮಿಸಲಾಗಿದೆ.

Battle Tanker in Shimoga

POINT 2 jpg1971ರಲ್ಲಿ ಪಾಕಿಸ್ತಾನದಿಂದ ಬಾಂಗ್ಲಾದೇಶ ವಿಮೋಚನೆ ಬಯಸಿತು. ಈ ಸಂದರ್ಭ ಎರಡು ದೇಶಗಳ ಮಧ್ಯೆ ಯುದ್ದ ನಡೆಯಿತು. ಆಗ ಪಾಕಿಸ್ತಾನ ಸೇನೆಯ ವಿಮಾನಗಳು ಭಾರತದ ಮೇಲೆ ದಾಳಿ ನಡೆಸಿದ್ದವು. ಹಾಗಾಗಿ ಭಾರತವು ಪಾಕಿಸ್ತಾನದ ಮೇಲೆ ಯುದ್ದ ಸಾರಿತು. ಈ ಯುದ್ದದಲ್ಲಿ ಭಾರತ ಜಯ ಗಳಿಸಿತು. ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಲಭಿಸಿತು. ಈಗ ಶಿವಮೊಗ್ಗಕ್ಕೆ ಬರುತ್ತಿರುವ ಯುದ್ದ ಟ್ಯಾಂಕರ್‌ 1971ರ ಯುದ್ದದಲ್ಲಿ ಭಾಗವಹಿಸಿತ್ತು. ಪಾಕಿಸ್ತಾನದ ಟ್ಯಾಂಕರ್‌, ಸೇನಾ ನೆಲಗಳ ಮೇಲೆ ದಾಳಿ ನಡೆಸಿತ್ತು.

POINT 3 jpgಶಿವಮೊಗ್ಗದ ಎಂಆರ್‌ಎಸ್‌ ಸರ್ಕಲ್‌ನ ಮಧ್ಯದಲ್ಲಿ ಯುದ್ದ ಟ್ಯಾಂಕರ್‌ ತಂದು ನಿಲ್ಲಿಸುವ ಕುರಿತು ಮಹಾನಗರ ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆ ಒಂದು ಟ್ಯಾಂಕರ್‌ ಒದಗಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಸಲ್ಲಿಸಿದ್ದರು. ಶಿವಮೊಗ್ಗದ ಸೈನಿಕ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ.ಹಿರೇಮಠ, ಅಧಿಕಾರಿ ಮೇಜರ್‌ ಉದಯ್‌, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳ ಶ್ರಮದಿಂದ ಯುದ್ದ ಟ್ಯಾಂಕರ್‌ ಶಿವಮೊಗ್ಗಕ್ಕೆ ಬಂದಿದೆ.

Department of Sanik Welfare

POINT 4 jpgಎಂಆರ್‌ಎಸ್‌ ಸರ್ಕಲ್‌ನಲ್ಲಿ ಯುದ್ದ ಟ್ಯಾಂಕರ್‌  ಸ್ಥಾಪನೆಗೆ ಈ ಹಿಂದೆ ಪ್ರಯತ್ನವಾಗಿತ್ತು. 2021ರಲ್ಲಿ ಯುದ್ದ ಟ್ಯಾಂಕರ್‌ ರವಾನಿಸಲು ರಕ್ಷಣಾ ಇಲಾಖೆ ಸಿದ್ಧವಾಗಿತ್ತು. ಆದರೆ ಮಹಾನಗರ ಪಾಲಿಕೆಯ ಆಗಿನ ಕೆಲ ಅಧಿಕಾರಿಗಳು ನಿರಾಸಕ್ತಿಯಿಂದ ಟ್ಯಾಂಕರ್‌ ಹಿಂಪಡೆಯಲಾಗಿತ್ತು.

ಇದನ್ನೂ ಓದಿ – ಕೇಂದ್ರ ಸಚಿವರನ್ನು ಭೇಟಿಯಾದ ಶಿವಮೊಗ್ಗ ಸಂಸದ, ಮೆಕ್ಕೆಜೋಳ ಕುರಿತು ಮಹತ್ವದ ಮನವಿ, ಏನಿದೆ ಮನವಿಯಲ್ಲಿ?

POINT 5 jpgರಾಜ್ಯದ ವಿವಿಧೆಡೆ ಪ್ರಮುಖ ಸ್ಥಳಗಳಲ್ಲಿ ಈಗಾಗಲೆ ಯುದ್ದ ಟ್ಯಾಂಕರ್‌ಗಳನ್ನು ಇರಿಸಲಾಗಿದೆ. ಧರ್ಮಸ್ಥಳದ ಮ್ಯೂಸಿಯಂ, ಬೆಂಗಳೂರು ಮತ್ತು ಬೆಳಗಾವಿಯ ಪ್ರಮುಖ ಸ್ಥಳಗಳಲ್ಲಿ ಟ್ಯಾಂಕರ್‌ ಇರಿಸಲಾಗಿದೆ. ಈಗ ಶಿವಮೊಗ್ಗಕ್ಕೆ ಒಂದು ಟ್ಯಾಂಕರ್‌ ಬಂದಿದೆ. ಸದ್ಯದಲ್ಲೇ ಮೈಸೂರಿಗು ಯುದ್ದ ಟ್ಯಾಂಕರ್‌ ತಲುಪಲಿದೆ.

ಮೂರು ತಿಂಗಳಲ್ಲಿ ಬರುತ್ತೆ ಯುದ್ದ ವಿಮಾನ

081220 BY Raghavendra Press Meet 1

ಇನ್ನು, ಯುದ್ದ ಟ್ಯಾಂಕರ್‌ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಲೈವ್.ಕಾಂಗೆ ಪ್ರತಿಕ್ರಿಯೆ ನೀಡಿದರು. ‘ಎಂಆರ್‌ಎಸ್‌ ಸರ್ಕಲ್‌ನಲ್ಲಿ ಯುದ್ದ ಟ್ಯಾಂಕರ್‌ ನಿಲ್ಲಿಸುವ ಕುರಿತು ಮಹಾನಗರ ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಟ್ಯಾಂಕರ್‌ ಒದಗಿಸುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಮಾಡಿದ್ದೆ. ಅದರಂತೆ ಟ್ಯಾಂಕರ್‌ ಬಂದಿದೆ. ಈಗ ಒಂದು ಯುದ್ದ ವಿಮಾನಕ್ಕೆ ಬೇಡಿಕೆ ಇಟ್ಟಿದ್ದೇನೆ. ಇನ್ನು ಮೂರು ತಿಂಗಳಲ್ಲಿ ಅದು ಕೂಡ ಶಿವಮೊಗ್ಗಕ್ಕೆ ಆಗಮಿಸಲಿದೆ. ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆ ಮೂಲಕ ಅಗ್ನಿವೀರರನ್ನು ನೇಮಿಸಿಕೊಳ್ಳುತ್ತಿದೆ. ಶಿವಮೊಗ್ಗದಲ್ಲಿ ರಕ್ಷಾ ವಿವಿಯನ್ನು ಸ್ಥಾಪಿಸಿದ್ದೇವೆ. ಟ್ಯಾಂಕರ್‌, ಯುದ್ದ ವಿಮಾನಗಳು ಯುವಕರು ಸೇನೆಗೆ ಸೇರಲು ಪ್ರೇರಣೆ ನೀಡಲಿದೆʼ ಎಂದರು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 12, 2023

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

Leave a Comment