SHIVAMOGGA LIVE NEWS | 18 NOVEMBER 2023
SHIMOGA : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ನೂತನ ಇನ್ಸ್ಪೆಕ್ಟರ್ಗಳನ್ನು (Inspectors) ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಖಾಲಿ ಉಳಿದಿದ್ದ ಇನ್ಸ್ಪೆಕ್ಟರ್ ಹುದ್ದೆಗಳು ಭರ್ತಿಯಾಗಿವೆ.
ಯಾವ್ಯಾವ ಠಾಣೆಗೆ ಯಾರು ವರ್ಗಾವಣೆ?
ದೊಡ್ಡಪೇಟೆ ಪೊಲೀಸ್ ಠಾಣೆ : ಸಿಐಡಿಯಿಂದ ರವಿ ಸಂಗನಗೌಡ ಪಾಟೀಲ್ ಅವರನ್ನು ವರ್ಗಾಯಿಸಲಾಗಿದೆ. ಹಾಗಾಗಿ ಬೆಂಗಳೂರಿಗೆ ವರ್ಗಾವಾದರೂ ರಿಲೀವ್ ಆಗದೆ ಉಳಿದಿದ್ದ ಇನ್ಸ್ಪೆಕ್ಟರ್ ಅಂಜನ್ ಕುಮಾರ್ ಈಗ ರಿಲೀವ್ ಆಗಲಿದ್ದಾರೆ.
ಕೋಟೆ ಪೊಲೀಸ್ ಠಾಣೆ : ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಚಂದ್ರಶೇಖರ್ ಎನ್.ಹರಿಹರ ಅವರನ್ನು ವರ್ಗಾಯಿಸಲಾಗಿದೆ.
ಇದನ್ನೂ ಓದಿ- ಜೈಲ್ ರಸ್ತೆ ಕರ್ಮಕಾಂಡ, 6 ತಿಂಗಳಿಗು ಹೆಚ್ಚು ಕಾಲ ನಡೆಯಿತು ಕಾಮಗಾರಿ, ಕೆಲವೇ ತಿಂಗಳಲ್ಲಿ ಬಿತ್ತು ಗುಂಡಿ
ಜಯನಗರ ಪೊಲೀಸ್ ಠಾಣೆ : ಖಾನಾಪುರ ಪೊಲೀಸ್ ಟ್ರೇನಿಂಗ್ ಸ್ಕೂಲ್ಗೆ ವರ್ಗಾವಣೆ ಆದೇಶದಲ್ಲಿದ್ದ ಹೆಚ್.ಎಂ.ಸಿದ್ದೇಗೌಡ ಅವರನ್ನು ವರ್ಗಾಯಿಸಲಾಗಿದೆ. ಈ ಹಿಂದೆ ಶಿವಮೊಗ್ಗ ಸಂಚಾರ ಠಾಣೆ ಇನ್ಸ್ಪೆಕ್ಟರ್ ಆಗಿ ಜವಾಬ್ದಾರಿ ನಿಭಾಯಿಸಿದ್ದರು.
ಸಾಗರ ಗ್ರಾಮಾಂತರ ಠಾಣೆ : ಐಎಸ್ಡಿ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಆದೇಶದಲ್ಲಿದ್ದ ಸಿ.ಇ.ರೋಹಿತ್ ಅವರನ್ನು ವರ್ಗಾಯಿಸಲಾಗಿದೆ.
ಇನ್ನು, ಶಿವಮೊಗ್ಗದ ಡಿಸಿಆರ್ಬಿ ಡಿವೈಎಸ್ಪಿ ಆಗಿದ್ದ ಡಿ.ಟಿ.ಪ್ರಭು ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200