ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ಶಿವಮೊಗ್ಗ | ರಾತ್ರಿ ಊಟ ಮಾಡುತ್ತಿದ್ದಾಗ ಮನೆಗೆ ಬಂದ ಪೊಲೀಸರು ತನ್ನ ಪತಿಯನ್ನು ಕರೆದೊಯ್ದು ಗುಂಡು ಹಾರಿಸಿದ್ದಾರೆ. ಬಳಿಕ ಸುಳ್ಳು ಆಪಾದನೆ ಹೊರಿಸಿದ್ದಾರೆ ಎಂದು ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ಗೆ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾನ ಪತ್ನಿ ಶಭಾನಾ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಭಾನಾ, ತನ್ನ ಗಂಡ ಜಬೀವುಲ್ಲಾ ಯಾವುದೆ ತಪ್ಪು ಮಾಡಿಲ್ಲ. ಆದರೆ ಆತನ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ ಎಂದರು.
ಮಫ್ತಿಯಲ್ಲಿ ರಾತ್ರಿ ಬಂದರು ಪೊಲೀಸರು
ಆಗಸ್ಟ್ 15ರಂದು ಮಧ್ಯಾಹ್ನ ಜಬೀವುಲ್ಲಾ ನಮಾಜ್ಗೆ ತೆರಳಿದ್ದರು. ಮಧ್ಯಾಹ್ನ ತನಗೆ ಕರೆ ಮಾಡಿ ಇಲ್ಲಿ ಗಲಾಟೆ ಆಗುತ್ತಿದೆ ಎಂದು ತಿಳಿಸಿದ್ದರು. ಬೇಗ ಮನೆಗೆ ಬನ್ನಿ ಎಂದಾಗ ಮನೆಗೆ ಬಂದಿದ್ದರು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಆರೋಪಿ ಬಂಧಿಸಿದ ಪೊಲೀಸರು
ಸಂಜೆ ವೇಳೆಗೆ ಎಂದಿನಂತೆ ನಮಾಜ್ಗೆ ಹೋಗಿ ವಾಪಸ್ ಮನೆಗೆ ಮರಳಿದ್ದರು. ರಾತ್ರಿ 9.30ರ ಹೊತ್ತಿಗೆ ಮಫ್ತಿಯಲ್ಲಿದ್ದ ಪೊಲೀಸರು ಮನೆಗೆ ಬಂದು, ಊಟ ಮಾಡುತ್ತಿದ್ದ ಜಬೀವುಲ್ಲಾನನ್ನು ಕರೆದುಕೊಂಡು ಹೋದರು. ಮತ್ತೆ ವಾಪಸ್ ಬಂದ ಪೊಲೀಸರು ನನ್ನ ಮೊಬೈಲ್ ಪಡೆದುಕೊಂಡು ಹೋದರು ಎಂದು ಶಭಾನಾ ಆರೋಪಿಸಿದರು.
ಶೂಟ್ ಮಾಡಿದ್ದು ಬೆಳಗ್ಗೆ ಗೊತ್ತಾಯ್ತು
ಬೆಳಗ್ಗೆ ಎದ್ದಾಗ ನಮ್ಮ ಪಕ್ಕದ ಮನೆಯವರು ನಿನ್ನ ಗಂಡನಿಗೆ ಪೊಲೀಸರು ಶೂಟ್ ಮಾಡಿದ್ದಾರೆ ಎಂದು ಹೇಳಿದರು. ಇದನ್ನು ಕೇಳಿ ಆಘಾತ ಉಂಟಾಯಿತು ಎಂದು ತಿಳಿಸಿದರು.
ಜಬಿವುಲ್ಲಾ ಚಾಕುವಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ. ಹಾಗಾಗಿ ಶೂಟ್ ಮಾಡಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಊಟ ಮಾಡುತ್ತಿದ್ದ ಜಬಿವುಲ್ಲಾನನ್ನು ಪೊಲೀಸರು ಮನೆಯಿಂದಲೇ ಕರೆದುಕೊಂಡು ಹೋಗಿದ್ದಾರೆ. ಹೀಗಿರುವಾಗ ಜಬಿವುಲ್ಲಾ ಬಳಿ ಚಾಕು ಬರುವುದಾದರೂ ಹೇಗೆ ಎಂದು ಶಭಾನಾ ಪ್ರಶ್ನಿಸಿದರು.
ಪೊಲೀಸರು ಜಬಿಯನ್ನು ಮನೆಯಿಂದ ಕರೆದುಕೊಂಡು ಹೋಗಿದ್ದು ರಾತ್ರಿ ಒಂಭತ್ತು ಮುಕ್ಕಾಲಿಗೆ. ಜಬಿ ಕಾಲಿಗೆ ಶೂಟ್ ಮಾಡಿದ್ದು ಬೆಳಗಿನ ಜಾವ ಎರಡುವರೆ ಗಂಟೆಗೆ. ಜಬಿ ಪೊಲೀಸರ ಮೇಲೆ ಹಲ್ಲೆ ನಡೆಸುವುದಾದರೆ ಮನೆಯಿಂದ ಕರೆದುಕೊಂಡು ಹೋಗುವಾಗಲೇ ಹಲ್ಲೆ ನಡೆಸುತ್ತಿದ್ದ. ಪೊಲೀಸರು ಕರೆದುಕೊಂಡು ಹೋದ ಮೇಲೆ ಜಬಿ ಕೈಗೆ ಚಾಕು ಸಿಗುವುದಾದರೂ ಹೇಗೆ ಎಂದು ಶಭಾನಾ ಪ್ರಶ್ನಿಸಿದ್ದಾರೆ.
ಸಣ್ಣ ಪುಟ್ಟ ಕಳ್ಳತನ ಮಾಡುತ್ತಿದ್ದ
ಜಬೀವುಲ್ಲಾ ಆರು ವರ್ಷದ ಹಿಂದೆ ಕೆಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆದರೆ ಕಳ್ಳತನ ಬಿಟ್ಟ ಬಳಿಕ ಆಟೋ ಓಡಿಸಿಕೊಂಡಿದ್ದ. ಈಗ ಸಾಲ ಮಾಡಿ ಹೊಸ ಉದ್ಯಮ ಆರಂಭಿಸಬೇಕು ಎಂದುಕೊಂಡಿದ್ದರು. ಆದರೆ ಎಂದೂ ಹೊಡದಾಟ ಪ್ರಕರಣಗಳಲ್ಲಿ ಭಾಗಿ ಆಗಿರಲಿಲ್ಲ ಎಂದು ಶಭಾನಾ ತಿಳಿಸಿದರು.
ಇದನ್ನೂ ಓದಿ | ಫ್ಲೆಕ್ಸ್ ವಿವಾದ, ಶಿವಮೊಗ್ಗದಲ್ಲಿ ಕೋಟಿ ಕೋಟಿ ನಷ್ಟ, ‘ಬ್ರ್ಯಾಂಡ್ ಶಿವಮೊಗ್ಗ’ಕ್ಕೆ ಕಪ್ಪು ಚುಕ್ಕೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






