BREAKING NEWS – ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಶಿವಮೊಗ್ಗದಲ್ಲಿ ಸಾವು

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ (Convict) ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲ್ಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದು ಗುರುತಿಸಲಾಗಿದೆ.

ಮೃತ ಕೃಷ್ಣ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ. ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದ. ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನಲೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ಜೈಲು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

160125 mc gann hospital general image

ಇದನ್ನೂ ಓದಿ » ಮಂಡಗದ್ದೆ ಬಳಿ ಅರಣ್ಯ ಇಲಾಖೆ ದಿಢೀರ್‌ ಕಾರ್ಯಾಚರಣೆ, ಇಬ್ಬರು ಆರೋಪಿಗಳು ಅರೆಸ್ಟ್‌

ಡಿಸೆಂಬರ್ 5ರಂದು ಸಂಜೆ ಕೃಷ್ಣನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಇಂದು ಬೆಳಗಿನ ಜಾವ 2 ಗಂಟೆಗೆ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಡಿಸೆಂಬರ್ 9, 2025

Leave a Comment