SHIVAMOGGA LIVE NEWS | 16 AUGUST 2023
ಮರದಿಂದ ಕೆಳಗೆ ಬಿದ್ದು ಬೆನ್ನು ಮುರಿದುಕೊಂಡ ಕೂಲಿ ಕಾರ್ಮಿಕ
SHIMOGA : ಮನೆಯೊಂದರ ಮುಂದೆ ಮಾವಿನ ಮರದ ರೆಂಬೆ ಕತ್ತರಿಸುವಾಗ ಆಯಾ ತಪ್ಪಿ ಕೆಳಗೆ ಬಿದ್ದು ಕೂಲಿ ಕಾರ್ಮಿಕನ (Wage labour) ಬೆನ್ನು ಮೂಳೆ ಮರಿದಿದೆ. ಈ ಹಿನ್ನೆಲೆ ಮನೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಗೋಪಾಳದಲ್ಲಿ ಘಟನೆ ಸಂಭವಿಸಿದೆ. ಜಾಫರ್ (38) ಬೆನ್ನು ಮೂಳೆ ಮರುದಿದ್ದು ಗಂಭೀರ ಸ್ಥಿತಿಗೆ ತಲುಪಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಜು.30ರಂದು ಗೋಪಾಳದ ಮನೆಯೊಂದರ ಮುಂದೆ ಘಟನೆ ಸಂಭವಿಸಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸದ ಹಿನ್ನೆಲೆ ಮನೆ ಮಾಲೀಕನ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಂಟ್ರಲ್ ಜೈಲಿನಲ್ಲಿ ಕೈ ಕೈ ಮಿಲಾಯಿಸಿದ ಕೈದಿಗಳು
SHIMOGA : ಕ್ಷುಲಕ ವಿಚಾರಕ್ಕೆ ಜೈಲಿನಲ್ಲಿ (Jail) ಕೈದಿಗಳು ಬಡಿದಾಡಿಕೊಂಡಿದ್ದು, ಕಲ್ಲಿನಿಂದ ಹೊಡೆದುಕೊಂಡಿದ್ದಾರೆ. ಮೂವರ ವಿರುದ್ಧ ಜೈಲು ಸೂಪರಿಂಟೆಂಡೆಂಟ್ ಡಾ. ಅನಿತಾ ಅವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಆ.14ರಂದು ಸಂಜೆ 6.30ರ ಹೊತ್ತಿಗೆ ಜೈಲಿನ ಭದ್ರಾ ಬ್ಲಾಕ್ನ ಮುಂಭಾಗ ವಿಚಾರಣಾಧೀನ ಕೈದಿಗಳಾದ ಲತೀಫ್ (20), ಶೋಹೇಬ್ ಅಲಿಯಾಸ್ ಸುಹೇಲ್ (21), ಶಮ್ಶೀರ್ ಅಲಿಯಾಸ್ ಗೌಸ್ ಖಾನ್ (27) ಬಡಿದಾಡಿಕೊಂಡಿದ್ದಾರೆ. ಜೈಲು ನಿಯಮಗಳನ್ನು ಉಲ್ಲಂಘಿಸಿ ಶಾಂತಿ ಸುವ್ಯವಸ್ಥೆ ಹದಗೆಡಿಸಿದಾರೆ ಎಂದು ಆರೋಪಿಸಿ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ-ಗೃಹ ಜ್ಯೋತಿ ಉಚಿತ ವಿದ್ಯುತ್ ನಿರೀಕ್ಷೆಯಲ್ಲಿದ್ದ ಗ್ರಾಹಕನಿಗೆ ಮೆಸ್ಕಾಂನಿಂದ ಶಾಕ್
ಡಿಸಿಸಿ ಬ್ಯಾಂಕ್ ನೇಮಕಾತಿ ತನಿಖೆಗೆ ಮಧು ಪತ್ರ
SHIMOGA : ಡಿಸಿಸಿ ಬ್ಯಾಂಕ್ (DCC bank) ನೇಮಕಾತಿ ಪರೀಕ್ಷೆ ಮತ್ತು ಮೌಲ್ಯಮಾಪನ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅನೇಕ ಅಭ್ಯರ್ಥಿಗಳು ತಮಗೆ ಅನ್ಯಾಯವಾಗಿದೆ ಎಂದು ಗೋಳು ತೋಡಿಕೊಂಡಿದ್ದರು. ಅವರಿಗೆ ನ್ಯಾಯ ಒದಗಿಸಲು ಸೂಕ್ತ ತನಿಖೆ ಅವಶ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200