ನಾಳೆಯಿಂದ ಶಿವಮೊಗ್ಗ ಬೆಂಗಳೂರು ಜನಶತಾಬ್ದಿ ರೈಲು ಶುರು, ನಿಲ್ದಾಣದಲ್ಲಿ ಸಿದ್ಧತೆ ಹೇಗಿದೆ? ಏನೆಲ್ಲ ವ್ಯವಸ್ಥೆಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಮೇ 2020

ನಾಳೆಯಿಂದ ಶಿವಮೊಗ್ಗ ಬೆಂಗಳೂರು ಜನಶತಾಬ್ದಿ ರೈಲು ಸಂಚಾರ ಆರಂಭವಾಗಲಿದೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ಆಗುತ್ತಿದೆ. ಮತ್ತೊಂದೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಆರೋಗ್ಯ ತಪಾಸಣೆ ಮಾಡುವುದಕ್ಕೆ ರೈಲ್ವೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಸಾಮಾಜಿಕ ಅಂತರದ ಬಾಕ್ಸ್ ರೆಡಿ

ನಿಗದಿಯಂತೆ ಜೂನ್ 1ರಂದು ಬೆಳಗ್ಗೆ 5.30ಕ್ಕೆ ರೈಲು ಸಂಚಾರ ಆರಂಭವಾಗಲಿದೆ. ಸಾಮಾಜಿಕ ಅಂತರ ಮತ್ತು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಗಾಗಬೇಕಿರುವ ಹಿನ್ನೆಲೆ, ಪ್ರಯಾಣಿಕರು ನಿಗದಿತ ಸಮಯಕ್ಕಿಂತಲು 90 ನಿಮಿಷ ಮೊದಲೇ ರೈಲ್ವೆ ನಿಲ್ದಾಣ ತಲುಪಬೇಕಿದೆ. ಇನ್ನು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವ ಹಿನ್ನೆಲೆ ರೈಲ್ವೆ ನಿಲ್ದಾಣದ ಮುಂದೆ ಬಾಕ್ಸ್‍ಗಳನ್ನು ಹಾಕಲಾಗಿದೆ. ನಿಲ್ದಾಣದಾದ್ಯಂತ ಸ್ಯಾನಿಟೈಸ್ ಮಾಡಿದ್ದು, ಸ್ವಚ್ಛತೆ ಕಾಪಾಡಿಕೊಳ್ಳಲಾಗಿದೆ.

101062731 1132521820442570 4472953511000145920 n.jpg? nc cat=110& nc sid=8024bb& nc ohc=nncpOhQPkasAX EToyR& nc ht=scontent.fblr1 4

ಒಂದು ಬೋಗಿಯಲ್ಲಿ 54 ಮಂದಿಯಷ್ಟೇ

ಈ ಮೊದಲು ರೈಲು ಸಂಪೂರ್ಣ ಭರ್ತಿಯಾಗುತ್ತಿತ್ತು. ಆದರೆ ಸಾಮಾಜಿಕ ಅಂತರದ ನಿಯಮ ಪಾಲಿಸಬೇಕಿರುವ ಹಿನ್ನೆಲೆ, ಪ್ರತಿ ಬೋಗಿಗೆ 54 ಪ್ರಯಾಣಿಕರಷ್ಟೇ ಇರಬೇಕಿದೆ. ಹಾಗಾಗಿ ರೈಲಿನಲ್ಲಿ ಕೇವಲ 648 ಸೀಟುಗಳಷ್ಟೇ ಬುಕಿಂಗ್ ಮಾಡಲು ಅವಕಾಶವಿದೆ. ಮತ್ತೊಂದೆಡೆ ಎಸಿ ಕೋಚ್‍ಗಳು ಇರುವುದಿಲ್ಲ.

ಎಲ್ಲೆಲ್ಲಿ ನಿಲ್ಲುತ್ತೆ ಜನ ಶತಾಬ್ದಿ?

ಈ ಮೊದಲು ರೈಲು ಎಲ್ಲೆಲ್ಲಿ ಸ್ಟಾಪ್ ಇತ್ತೋ ಅಲ್ಲೆಲ್ಲ ನಿಲುಗಡೆ ಇರಲಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಭದ್ರಾವತಿ, ಕಡೂರು, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ತಲುಪಲಿದೆ.

Train General Image 1 1

ರೈಲ್ವೆ ನಿಲ್ದಾಣದಲ್ಲೂ ಟಿಕೆಟ್ ಬುಕಿಂಗ್

ಆನ್‍ಲೈನ್ ಮೂಲಕ ಮಾತ್ರ ರೈಲ್ವೆ ಟಿಕೆಟ್ ಬುಕಿಂಗ್ ಮಾಡಲು ಅವಕಾಶವಿತ್ತು. ಆದರೆ ಶಿವಮೊಗ್ಗದ ಸೇರಿಂತೆ ಆಯ್ದ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಪಿಆರ್‍ಎಸ್ ಕೌಂಟರ್‍ಗಳನ್ನು ಆರಂಭಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಹಾಗಾಗಿ ರೈಲ್ವೆ ನಿಲ್ದಾಣದಲ್ಲೂ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿಕೊಳ್ಳುವ ಆವಕಾಶವಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment