ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JUNE 2024
SHIMOGA : ಜಿಲ್ಲಾ ಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ, ಸೂಕ್ತ ಪರಿಹಾರ ಒದಗಿಸಲು ಜೂ.28ರಂದು ಕುವೆಂಪು ರಂಗಮಂದಿರದಲ್ಲಿ ಬೆಳಗ್ಗೆ 9.30ರಿಂದ ಜನ ಸ್ಪಂದನಾ (Jana Spandana) ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇರಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ತಾವೊಬ್ಬರೇ ಸಲ್ಲಿಸಬಹುದು. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶ ನೀಡಲಾಗುವುದು. ಅರ್ಜಿ ನೋಂದಾಯಿಸಿದ ನಂತರ ಟೋಕನ್ಗಳನ್ನು ಪಡೆಯಬೇಕು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಇದನ್ನೂ ಓದಿ – ನಾಳೆಯಿಂದ 3 ದಿನ ಶಿವಮೊಗ್ಗ, ಸೊರಬದಲ್ಲಿ ಸಚಿವ ಮಧು ಬಂಗಾರಪ್ಪ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






