SHIVAMOGGA LIVE NEWS, 17 JANUARY 2025
ಶಿವಮೊಗ್ಗ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೆ ರಾಜ್ಯ ಸಮ್ಮೇಳನ (Summit) ಜ.18, 19ರಂದು ತುಮಕೂರಿನಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮದ ವಿವಿಧ ಸ್ತರಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರ ವೃತ್ತಿ ಭದ್ರತೆ, ಮೂಲಸೌಕರ್ಯಗಳ ಸಂರಕ್ಷಣೆ ಸಂಘದ ಆಶಯವಾಗಿದೆ. ಆಧುನಿಕ ಯುಗಕ್ಕೆ ತಕ್ಕಂತೆ ಪತ್ರಕರ್ತರ ಬೌದ್ಧಿಕ ವಿಕಸನ ಮತ್ತು ಉನ್ನತೀಕರಣಕ್ಕೆ ಸಮ್ಮೇಳನದ ಮೂಲಕ ವೇದಿಕೆ ಕಲಿಸಲಾಗುತ್ತಿದೆ ಎಂದರು.
ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳ ಅವಲೋಕನ ಸಮ್ಮೇಳನದ ಮುಖ್ಯ ಉದ್ದೇಶ. ಸಮ್ಮೇಳನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳ ಸಭೆ ಮತ್ತು ಕಲ್ಪತರು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಗ್ರಾಮೀಣ ವರದಿಗಾರಿಕೆಗೆ ಜಿಲ್ಲೆಯ ರವಿ ಬಿದನೂರು ಅವರಿಗೆ ವಿಶೇಷ ಪ್ರಶಸ್ತಿ ದೊರೆತಿದೆ.
ಕೆ.ವಿ.ಶಿವಕುಮಾರ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ
ರವಿಕುಮಾರ್, ಗಾ.ರಾ.ಶ್ರೀನಿವಾಸ್, ವಿ.ಟಿ.ಅರುಣ್, ವೈದ್ಯನಾಥ್, ಸೋಮನಾಥ್ ಇದ್ದರು.
ಇದನ್ನೂ ಓದಿ » ‘4 ಪರ್ಸೆಂಟ್ ಕಮಿಷನ್ʼ ಪಡೆಯುತ್ತಿದ್ದ ಶಿವಮೊಗ್ಗ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ, ಏನಿದು ಕೇಸ್?