SHIVAMOGGA LIVE NEWS | 23 DECEMBER 2022
ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು (grama vastavya) ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜ ಕಡೆ ಘೋಷಣೆಯಡಿ ಸಂಘವು ಈ ಕಾರ್ಯ ಕೈಗೆತ್ತಿಕೊಂಡಿದೆ ಎಂದರು.
ವಾಸ್ತವ್ಯಕ್ಕೆ ಗ್ರಾಮದ ಆಯ್ಕೆ ಹೇಗೆ?
ಜ್ಲಿಲೆಯ ಅತ್ಯಂತ ಹಿಂದುಳಿದ ಗ್ರಾಮಗಳನ್ನು (grama vastavya) ಸಾರ್ವಜನಿಕರು, ವಿವಿಧ ಸಂಘಟನೆಗಳು, ಸಂಘ-ಸಂಸ್ಥೆಗಳು ತಿಳಿಸಿದರೆ, ಆ ಎಲ್ಲ ಗ್ರಾಮಗಳಿಗೆ ಪತ್ರಕರ್ತರ ತಂಡ ಭೇಟಿ ನೀಡಿ ಮೂರು ಗ್ರಾಮಗಳನ್ನು ಅಂತಿಮಗೊಳಿಸಲಾಗುವುದು.
ಆ ಮೂರು ಕುಗ್ರಾಮಗಳಲ್ಲಿ ಪತ್ರಕರ್ತರು ಒಂದು ದಿನ ವಾಸ್ತವ್ಯ ಹೂಡಿ ಅಲ್ಲಿನ ಸಮಸ್ಯೆಗಳನ್ನು ಸುದ್ದಿರೂಪದಲ್ಲಿ ಪ್ರಕಟಿಸಲಾಗುವುದು. ಪ್ರಕಟಗೊಂಡ ಎಲ್ಲ ವರದಿಗಳನ್ನು ಕ್ರೋಢಿಕರಿಸಿ ಅಂತಿಮ ವರದಿ ಸಿದ್ದಗೊಳಿಸಿ ಆಯಾ ಗ್ರಾಮದ ವ್ಯಾಪ್ತಿಯ ಶಾಸಕರು, ಜಿಲ್ಲಾಡಳಿತ, ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಗ್ರಾಮದ ಅಭಿವೃದ್ಧಿ ಕುರಿತು ಸಮಗ್ರ ವರದಿ ನೀಡಲಾಗುತ್ತದೆ.
ಅಷ್ಟೇ ಅಲ್ಲದೆ, ಸರ್ಕಾರಕ್ಕೆ ವರದಿ ನೀಡಿದ ಬಳಿಕ ಅದರ ಪ್ರಗತಿ ಕುರಿತು ಸಂಘ ನಿರಂತವಾಗಿ ಪ್ರಯತ್ನಿಸಲಿದೆ.
ಇದನ್ನೂ ಓದಿ – ಶಿವಮೊಗ್ಗ ಪೊಲೀಸ್ಗೆ ರಾಷ್ಟ್ರಮಟ್ಟದ ಗರಿ, ಇನ್ಸ್ಪೆಕ್ಟರ್ ಗುರುರಾಜ್ ಇಂಡಿಯಾ ಸೈಬರ್ ಕಾಪ್
ಪತ್ರಕರ್ತರ ಸಂಘಟನೆ ಇತಿಹಾಸದಲ್ಲಿ ಮೊದಲ ಬಾರಿ ಈ ರೀತಿಯ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಜೊತೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಉದ್ದೇಶದಿಂದ ವರ್ಷ ಪೂರ್ತಿ ಮಾದಕ ವಸ್ತು ವಿರೋಧಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಸಾಂಸ್ಕೃತಿ, ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕುಗ್ರಾಮಗಳನ್ನು ತಿಳಿಸಲು ಸಾವರ್ಜನಿಕರು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ (9108825454), ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ(9341126340) ಅವರನ್ನು ಸಂಪರ್ಕಿಸಬಹುದಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200