SHIVAMOGGA LIVE NEWS | 9 DECEMBER 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರು ಒಗ್ಗಟ್ಟಿನಿಂದ, ಇಚ್ಛಾಶಕ್ತಿ ಪ್ರದರ್ಶಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ. ಎಲ್ಲಾ ಕಾರ್ಯಕರ್ತರು ಇದನ್ನು ಸವಾಲಾಗಿ (challenge) ಸ್ವೀಕರಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದೀಪಕ್ ಸಿಂಗ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಕಾಗೊಡು ತಿಮ್ಮಪ್ಪ ಅವರು, ದೇಶದಲ್ಲಿ ಸುದೀರ್ಘ ಅವಧಿ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸಿದೆ. ಆದರೆ ಜಿಲ್ಲೆಯಲ್ಲಿ ಸಂಘಟನೆ ಕುಂಟಿತಗೊಂಡಿದೆ. ಪಕ್ಷವನ್ನು ಪುನಃ ಕಟ್ಟಿ, ಪ್ರವರ್ಧಮಾನಕ್ಕೆ ತರಬೇಕು ಎಂದು ತಿಳಿಸಿದರು. (challenge)
ಇದನ್ನೂ ಓದಿ – ಕ್ಷೇತ್ರ ಪರಿಚಯ | ಶಿವಮೊಗ್ಗ ಕ್ಷೇತ್ರ, ಜಾತಿ ಲೆಕ್ಕಾಚಾರ ತಲೆ ಕೆಳಗಾಗಿಸಿದ ಕ್ಷೇತ್ರ, ಹಿನ್ನೆಲೆ ಏನು?
ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದ ಕುರಿತು ಜನರಲ್ಲಿ ಈಗಲು ಒಳ್ಳೆಯ ಅಭಿಪ್ರಾಯವಿದೆ. ಕಾರ್ಯಕರ್ತರು ಜನರ ಮನೆ ಬಳಿ ಹೋಗಿ ಗಮನ ಸೆಳೆಯಬೇಕು. ಪಕ್ಷ ತೊರೆದವರನ್ನ ಪಕ್ಷಕ್ಕೆ ಕರೆತರಬೇಕು. ಬಿಜೆಪಿ ವಿರುದ್ಧ ನಾವು ಟೀಕೆ ಮಾಡುವುದನ್ನು ಬಿಟ್ಟು, ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿದ ಒಳ್ಳೆಯ ಕೆಲಸಗಳನ್ನು ಜನರ ಮುಂದಿಡುವ ಪ್ರಯತ್ನವಾಗಬೇಕು ಎಂದರು. (challenge)
ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರು ಮಾತನಾಡಿ, ಉತ್ತರ ಬ್ಲಾಕ್ ನಲ್ಲಿ ಉತ್ತಮ ಮತಗಳು ಬಂದರೆ ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಬಹುತೇಕ ಮುಖಂಡರು ಇರುವುದು ಉತ್ತರ ಬ್ಲಾಕ್ ನಲ್ಲಿ. ಆದರೆ ಇಲ್ಲಿಯೆ ನಮ್ಮ ಮತ ಗಳಿಕೆ ಪ್ರಮಾಣ ಕಡಿಮೆ ಇದೆ. ಊರಿಗೆಲ್ಲ ನಾಯಕ, ಮನೆಯ ಮತ ಮಾತ್ರ ಪಕ್ಷಕ್ಕಿಲ್ಲ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ ಸೇರಿದಂತೆ ಹಲವು ನಾಯಕರು ಇದ್ದರು.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – SHIVAMOGGA LIVE COMMUNITY



