ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜನವರಿ 21ರಂದು ರಾತ್ರಿ ಕಲ್ಲು ಕ್ವಾರಿಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಸ್ಪೋಟಕಗಳು ಸ್ಪೋಟಗೊಂಡು ಶಿವಮೊಗ್ಗ ಸೇರಿದಂತೆ ಪಕ್ಕದ ಜಿಲ್ಲೆಯಲ್ಲೂ ಭೂಕಂಪನ ಅನುಭವವಾಗಿತ್ತು. ಸ್ಪೋಟದಿಂದ ಹುಣಸೋಡು ಸೇರಿ ಹಲವೆಡೆ ಅನೇಕ ಗ್ರಾಮಗಳ ಮನೆಗಳ ಗೋಡೆಗಳು ಬಿರುಕು ಬಿಟ್ಟಿದೆ. ಕೆಲವು ಮನೆಗಳ ಚಾವಣಿ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾಳಾಗಿವೆ ಎಂದು ಆರೋಪಿಸಿರು.
ತಮ್ಮದಲ್ಲದ ತಪ್ಪಿಗೆ ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಸುಮಾರು 500 ಅರ್ಜಿಗಳು ಬಂದಿವೆ. ಆದರೆ ಈತನಕ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಪರಿಹಾರವನ್ನೂ ಕೊಟ್ಟಿಲ್ಲ. ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ವೇದಿಕೆ ಅಧ್ಯಕ್ಷ ಗೋ.ರಮೇಶ್ ಗೌಡ, ಸಂತೋಷ್, ದೇವೇಂದ್ರಪ್ಪ, ನಾಗರಾಜ್, ನಯನಾ, ಆಶ್ರಫ್, ಪರಶುರಾಮ, ಶಿವಣ್ಣ, ರಾಜು ಗುಜ್ಜರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






