ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜನವರಿ 21ರಂದು ರಾತ್ರಿ ಕಲ್ಲು ಕ್ವಾರಿಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಸ್ಪೋಟಕಗಳು ಸ್ಪೋಟಗೊಂಡು ಶಿವಮೊಗ್ಗ ಸೇರಿದಂತೆ ಪಕ್ಕದ ಜಿಲ್ಲೆಯಲ್ಲೂ ಭೂಕಂಪನ ಅನುಭವವಾಗಿತ್ತು. ಸ್ಪೋಟದಿಂದ ಹುಣಸೋಡು ಸೇರಿ ಹಲವೆಡೆ ಅನೇಕ ಗ್ರಾಮಗಳ ಮನೆಗಳ ಗೋಡೆಗಳು ಬಿರುಕು ಬಿಟ್ಟಿದೆ. ಕೆಲವು ಮನೆಗಳ ಚಾವಣಿ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾಳಾಗಿವೆ ಎಂದು ಆರೋಪಿಸಿರು.
ತಮ್ಮದಲ್ಲದ ತಪ್ಪಿಗೆ ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಸುಮಾರು 500 ಅರ್ಜಿಗಳು ಬಂದಿವೆ. ಆದರೆ ಈತನಕ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಪರಿಹಾರವನ್ನೂ ಕೊಟ್ಟಿಲ್ಲ. ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ವೇದಿಕೆ ಅಧ್ಯಕ್ಷ ಗೋ.ರಮೇಶ್ ಗೌಡ, ಸಂತೋಷ್, ದೇವೇಂದ್ರಪ್ಪ, ನಾಗರಾಜ್, ನಯನಾ, ಆಶ್ರಫ್, ಪರಶುರಾಮ, ಶಿವಣ್ಣ, ರಾಜು ಗುಜ್ಜರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






