| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020
ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಿರುವುದಕ್ಕೆ ಶಿವಮೊಗ್ಗದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಪ್ರಾಧಿಕಾರ ರಚಿಸುವ ನಿರ್ಧಾರವನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡ ವಿರೋಧಿಯಾಗಿದೆ. ಈ ನಿರ್ಧಾರದಿಂದ ಹಿಂದೆ ಸರಿಯದೆ ಇದ್ದರೆ ಸರ್ಕಾರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೆರೆ ಪರಿಹಾರಕ್ಕೆ, ಸರ್ಕಾರಿ ನೌಕರರ ವೇತನ ನೀಡಲು ಹಣವಿಲ್ಲ ಅನ್ನುತ್ತಿದ್ದ ಸರ್ಕಾರ, ಮರಾಠ ಅಭಿವೃದ್ಧಿ ಪ್ರಾಧಿಕಾರಿಕ್ಕೆ 50 ಕೋಟಿ ರೂ. ಅನುದಾನ ಕೊಡುವ ಭರವಸೆ ನೀಡಿದೆ. ಕೂಡಲೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಒತ್ತಾಯಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಮಧುಸೂದನ್, ಉಸ್ತುವಾರಿ ಅಧ್ಯಕ್ಷ ರವಿಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ನಯಾಜ್, ಜಿಲ್ಲಾ ಕಾರ್ಯದರ್ಶಿ ನೂರುಲ್ಲ, ಜಿಲ್ಲಾ ವಕ್ತಾರ ಭರತ್, ಪ್ರಮುಖರಾದ ರಘುನಂದನ್, ಶಿವಕುಮಾರ್, ಅಮೃತ್, ಭರತ್, ಇಂದ್ರೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()