ಶಿವಮೊಗ್ಗ ಬಸ್‌ ನಿಲ್ದಾಣದ ಮುಂದೆ ಪ್ರತಿಕೃತಿಗೆ ಬೆಂಕಿ, ಮಹಾರಾಷ್ಟ್ರ ಬಸ್‌ ಸಿಬ್ಬಂದಿಗೆ ಮಸಿ ಬಳಿಯುವ ವಾರ್ನಿಂಗ್

ಶಿವಮೊಗ್ಗ : ಮರಾಠಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ KSRTC ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ದಾಳಿಕೋರರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

‘ಬಸ್ಸುಗಳ ಸಿಬ್ಬಂದಿಗೆ ಮಸಿ ಬಳಿಯುತ್ತೇವೆʼ

Parishrama advt 10 feb 2025 1

ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಒಂದು ವೇಳೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಶಿವಮೊಗ್ಗದಲ್ಲಿ ಮಹಾರಾಷ್ಟ್ರದ ಬಸ್ಸುಗಳ ಚಾಲಕ, ನಿರ್ವಾಹಕರಿಗೆ ಮಸಿ ಬಳಿದು ಕಳುಹಿಸಲಾಗುತ್ತದೆ ಎಂದು ಎಚ್ಚರಿಸಿದರು.

Karave-Protest-in-Shimoga-against-MES-and-maharashtra. ksrtc bus stand

ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಹಲ್ಲೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಶಿವಮೊಗ್ಗದಲ್ಲಿ ಮಹಾರಾಷ್ಟ್ರದ ಬಸ್ಸುಗಳನ್ನು ತಡೆದು ಕರ್ನಾಟಕದ ಧ್ವಜ ಕಟ್ಟುತ್ತೇವೆ. ಡ್ರೈವರ್‌, ಕಂಡಕ್ಟರ್‌ಗಳ ಮುಖಕ್ಕೆ ಮಸಿ ಬಳಿಯುತ್ತೆವೆ.

ಕಿರಣ್‌ ಕುಮಾರ್‌, ಕರವೇ ಸ್ವಾಭಿಮಾನಿ ಬಣದ ಅಧ್ಯಕ್ಷ

Karave-Protest-in-Shimoga-against-MES-and-maharashtra.

ಇದೇ ವೇಳೆ ದಾಳಿ ನಡೆಸಿದವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.‌

NATIONAL-PUBLIC-SCHOOL-scaled

ಇದನ್ನೂ ಓದಿ » ಶಿವಮೊಗ್ಗದಿಂದ ಹೊರಟ ವಿಶೇಷ ರೈಲು, ಕುಂಭ ಮೇಳದತ್ತ ಸಾವಿರಕ್ಕೂ ಹೆಚ್ಚು ಭಕ್ತರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment