ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯೋತ್ಸವ, ಸಚಿವರಿಂದ ಧ್ವಜಾರೋಹಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ನವೆಂಬರ್ 2021

ಶಿವಮೊಗ್ಗದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗದ ನೆಲ ಸಮಸಮಾಜದ ಪರಿಕಲ್ಪನೆಯ ನೆಲೆವೀಡು. ಕದಂಬರು, ಚಾಲುಕ್ಯರು, ಗಂಗರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರದ ಅರಸರು, ಮೈಸೂರು ಸಂಸ್ಥಾನ ಮತ್ತು ಕೆಳದಿ ಮನೆತನ ಈ ಪ್ರದೇಶವನ್ನು ಆಳುತ್ತ ಕನ್ನಡತನದ ಸೊಗಡನ್ನು ಇನ್ನಷ್ಟು ವಿಸ್ತರಿಸುವಲ್ಲಿ ತನ್ನ ಕೊಡುಗೆ ನೀಡಿದೆ. ಅನುಭವ ಮಂಟಪದ ಅಲ್ಲಮಪ್ರಭು ಬಳ್ಳಿಗಾವಿಯವರು, ಅಕ್ಕ ಮಹಾದೇವಿಯವರು ಉಡುತಡಿಯವರು, ಶರಣ ಚಿಂತನೆಗಳ ನೆಲೆವೀಡು ಎಂದೇ ಖ್ಯಾತವಾದ ಕಲ್ಯಾಣ ಚಳುವಳಿಯ ಮೇರು ವ್ಯಕ್ತಿತ್ವಗಳು ಶಿವಮೊಗ್ಗ ಜಿಲ್ಲೆಯವರು ಎಂಬುದು ನಮ್ಮ ಹೆಮ್ಮೆ ಎಂದರು.

ಇದೆ ವೇಳೆ ಸಚಿವರಿಗೆ ಪೊಲೀಸರು ಗೌರವ ವಂದನೆ ನೀಡಿದರು. ಕಲಾ ತಂಡಗಳು, ಸ್ಥಬ್ಧ ಚಿತ್ರಗಳ ಮೆರವಣಿಗೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸೇರಿದಂತೆ ಹಲವರು ಈ ವೇಳೆ ಇದ್ದರು.

ADVT JULY NANJAPPA HOSPITAL HOME LAB TESTING

AVvXsEhquP07wZZlCXz1qCAkesmorG5TMcf4S I aPUW858ooQhkxiyfiF2yczUYDMEZtLyRPL8ZcVl7aWPGAL72bfbb1c2RlAsraR5M2WxoWTnimZBWptdJC1sh HQteS5ASXI4vSK3sYdrfRmmTi fUgveMJN1d8NJwiZg5fu4MHJdWCAOEYJOdAaLIcPIkQ=s1189

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2021

Leave a Comment