ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ.
ಒಂದೇ ಒಂದು ಫೋನ್ ಕರೆ ಮಾಡಿದರೆ ನಿಮ್ಮ ಮನೆಗೆ ಬರಲಿದೆ ಲ್ಯಾಬೋರೇಟರಿ. ನುರಿತ ತಜ್ಞರಿಂದ ನಡೆಯುತ್ತೆ ತಪಾಸಣೆ. ಈಗಲೆ ಕರೆ ಮಾಡಿ.

ಶಿವಮೊಗ್ಗ ಜಿಲ್ಲೆಯಾದ್ಯಂತ 12 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಿಕಾರಿಪುರದಲ್ಲಿ 4, ಶಿವಮೊಗ್ಗದಲ್ಲಿ 3, ಉಳಿದ ತಾಲೂಕುಗಳಲ್ಲಿ ತಲಾ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 9,143 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ 2811 ಮತದಾರರಿದ್ದಾರೆ. ಭದ್ರಾವತಿಯಲ್ಲಿ 1202, ತೀರ್ಥಹಳ್ಳಿಯಲ್ಲಿ 730, ಹೊಸನಗರದಲ್ಲಿ 1052, ಸಾಗರದಲ್ಲಿ 839, ಸೊರಬದಲ್ಲಿ 510, ಶಿಕಾರಿಪುರದಲ್ಲಿ 1999 ಮತದಾರರಿದ್ದಾರೆ.
ಮರು ಆಯ್ಕೆ, ಹೊಸ ಹುರುಪು
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಲ್ವರು ಸ್ಪರ್ಧಿಗಳ ಮಧ್ಯೆ ಹಣಾಹಣಿ ಇದೆ. ನಿಕಟಪೂರ್ವ ಜಿಲ್ಲಾಧ್ಯಕ್ಷ ಶಂಕರಪ್ಪ ಅವರು ಮರು ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ಈ ಹಿಂದೆ ಮೂರು ಭಾರಿ ಜಿಲ್ಲಾಧ್ಯಕ್ಷರಾಗಿ ಅನುಭವ ಹೊಂದಿರುವ ಡಿ.ಮಂಜುನಾಥ್ ಅವರು ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದಾರೆ.
ಪತ್ರಕರ್ತರಾದ ಶಿ.ಜು.ಪಾಶ ಮತ್ತು ಗಾ.ರಾ.ಶ್ರೀನಿವಾಸ್ ಅವರು ಮೊದಲ ಭಾರಿ ಸ್ಪರ್ಧೆಗಿಳಿದಿದ್ದಾರೆ. ವಿನೂತನ ರೀತಿಯಲ್ಲಿ ಪ್ರಚಾರ ಮಾಡಿ ಮತದಾರರನ್ನು ಸೆಳೆಯಲು ಯತ್ನಿಸಿದ್ದಾರೆ.
ಯಾರಿಗೆ ಒಲಿಯಲಿದೆ ಜಯ?
ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆಗೆ ಮುಕ್ತಾಯವಾಗಲಿದೆ. ಬಳಿಕ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಸಂಜೆ 6 ಗಂಟೆ ಹೊತ್ತಿಗೆ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರಾರು ಅನ್ನುವುದು ಗೊತ್ತಾಗಲಿದೆ.
ಸದ್ಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದೆ. ಬೆಳಗ್ಗೆಯಿಂದಲೆ ಮತದಾರರು ಉತ್ಸಾಹದಿಂದ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕಡೆ ಕ್ಷಣದಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















