ಶಿವಮೊಗ್ಗದಲ್ಲಿ ಆನೆ ಮೇಲೆ ಸ್ವಾಮೀಜಿಯ ಅಂಬಾರಿ ಮೆರವಣಿಗೆ, ಯಾವಾಗ? ಎಲ್ಲೆಲ್ಲಿ ಸಾಗಲಿದೆ ಮೆರವಣಿಗೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ನಗರದ ಶಿವಶಕ್ತಿ ಸಮಾಜದಿಂದ ಅ.11ರಂದು ಸಮಾಜದ ಅಧ್ಯಕ್ಷೆ ಎನ್‌ಟಿ ರಸ್ತೆಯಲ್ಲಿನ ಹೆಚ್.ಪಾರ್ವತಮ್ಮ ಅವರ ಘಂಟಾಕರಣ ನಿವಾಸಕ್ಕೆ ಉತ್ತರಾಖಂಡ ಕೇದಾರಪೀಠದ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ (Kedara Peeta) ಆಗಮಿಸಲಿದ್ದಾರೆ ಎಂದು ಸಂತೋಷ್ ಬಳ್ಳೆಕೆರೆ ತಿಳಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತೋಷ್‌ ಬಳ್ಳೆಕೆರೆ, ಅ.10 ರಂದು ಸಂಜೆ 4ಕ್ಕೆ ಶಿವಪ್ಪನಾಯಕ ವೃತ್ತದಿಂದ ಸ್ವಾಮೀಜಿಯವರನ್ನು ಬೀರನಕೆರೆ ಮಠದ ಆನೆಯ ಅಂಬಾರಿ ಮೇಲೆ ಮೆರವಣಿಗೆ ಮೂಲಕ ಪಾರ್ವತಮ್ಮ ಅವರ ಮನೆಗೆ ಕರೆತಲಾಗುವುದು.ಇದಕ್ಕಾಗಿ ಅರಣ್ಯ ಇಲಾಖೆ ಅನುಮತಿ ಪಡೆಯಲಾಗಿದೆ ಎಂದರು.

ಏನೆಲ್ಲ ಕಾರ್ಯಕ್ರಮ ಇರಲಿದೆ?

ಅ.11ರಂದು ಪಾರ್ವತಮ್ಮ ಅವರ ಮನೆಯಲ್ಲಿ ಬೆಳಗ್ಗೆ 8ಕ್ಕೆ ಇಷ್ಟಲಿಂಗ ಪೂಜೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಧರ್ಮಸಭೆ ನಡೆಯಲಿದ್ದು, ಶ್ರೀ ಭೀಮಾಶಂಕರಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

Ballekere-Santosh-Press-meet about Kedara Peeta

ಧರ್ಮಸಭೆಯಲ್ಲಿ ಎಡೆಯೂರು ಬಾಳೆಹೊನ್ನೂರು ಖಾಸಾ ಶಾಖಾಮಠದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿಲಾಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುರುಹಾಲಸ್ವಾಮೀಜಿ,  ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಆಗಮಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ರತ್ನಾ ಮಂಜುನಾಥ್, ಉಮೇಶ್ ಹಿರೇಮಠ್, ಲಿಂಗೇಗೌಡ್ರು, ಸುನಂದಾ ಹಿರೇಮಠ್, ಮರುಳೇಶ್ ಮತ್ತಿತರರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಕ್ಬರ್‌ ಕಾಲಿಗೆ ಗುಂಡೇಟು, ಜಿಲ್ಲಾ ರಕ್ಷಣಾಧಿಕಾರಿ ಫಸ್ಟ್‌ ರಿಯಾಕ್ಷನ್‌, ಏನಂದ್ರು ಎಸ್‌ಪಿ?

Kedara Peeta

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment