Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಬಹಿರಂಗ ಚರ್ಚೆಗೆ ರೆಡಿ, ಈ‍ಶ್ವರಪ್ಪ, ಆರಗ ಜ್ಞಾನೇಂದ್ರಾಗೆ ಕಿಮ್ಮನೆ ಸವಾಲು, ಏನಿದು? ಇಲ್ಲಿದೆ ಪ್ರಮುಖ 5 ಪಾಯಿಂಟ್‌

ಬಹಿರಂಗ ಚರ್ಚೆಗೆ ರೆಡಿ, ಈ‍ಶ್ವರಪ್ಪ, ಆರಗ ಜ್ಞಾನೇಂದ್ರಾಗೆ ಕಿಮ್ಮನೆ ಸವಾಲು, ಏನಿದು? ಇಲ್ಲಿದೆ ಪ್ರಮುಖ 5 ಪಾಯಿಂಟ್‌

08/12/2023 5:24 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 8 DECEMBER 2023

SHIMOGA :  ಮಾಜಿ ಸಚಿವರಾದ ಕೆ.ಎಸ್.ಈ‍ಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ. ಶಿವಮೊಗ್ಗದಲ್ಲಿಯೇ ಚರ್ಚೆ ನಡೆಯಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಸವಾಲು ಹಾಕಿದ್ದಾರೆ.

ಕಿಮ್ಮನೆ ಸವಾಲು – ಇಲ್ಲಿದೆ 5 ಪಾಯಿಂಟ್‌

point-1ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸನಾತನ ಧರ್ಮದ ಕುರಿತು ಚರ್ಚೆಗೆ ವೇದಿಕೆ ಆಗಬಾರದು ಎಂದು ಆರಗ ಜ್ಞಾನೇಂದ್ರ ಹೇಳಿದ್ದರು. ಆದರೆ ಸನಾತನ ಧರ್ಮದ ಕುರಿತು ಚರ್ಚೆ ಯಾಕೆ ನಡೆಯಬಾರದು. ನಿಘಂಟಿನಲ್ಲಿ ಸನಾತನ ಧರ್ಮ ಎಂದರೆ ಹಿಂದಿನದ್ದು ಎಂಬ ಅರ್ಥವಿದೆ. ಇದಕ್ಕೆ ಪ್ರತ್ಯೇಕ ಕೃತಿಕಾರ, ಸಾಹಿತಿ ಇಲ್ಲ. ಈ ಬಗ್ಗೆ ಈಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಬಹಿರಂಗ ಚರ್ಚೆಗೆ ಬರಲಿ.

point-2ನಾನು ಕೂಡ ಹಿಂದೂ ಧರ್ಮಕ್ಕೆ ಸೇರಿದವನೆ. ದೇವರಲ್ಲಿ ನಂಬಿಕೆ ಇದೆ. ಹೋಮ – ಹವನ ಮಾಡಿಸಿದ್ದೇನೆ. ಶಾಸಕ, ಸಚಿವನಾಗಿದ್ದಾಗ ವೈಯಕ್ತಿಕ ಮತ್ತು ಸರ್ಕಾರದ ಅನುದಾನ ಸೇರಿ ಸುಮಾರು 50 ಕೋಟಿ ರೂ.ಗಳನ್ನು ದೇವಾಲಯಕ್ಕೆ ನೀಡಿದ್ದೇನೆ. ಆದರೆ ಹಿಂದೂ ಧರ್ಮದಲ್ಲಿನ ಮಾನವೀಯತೆಯ ವಿರುದ್ಧದ ಅಂಶಗಳನ್ನು ತೊಡೆದು ಹಾಕಬೇಕು ಎಂದು ಪ್ರತಿಪಾದಿಸುತ್ತೇನೆ.

point-3ಬಿಜೆಪಿಯಲ್ಲಿಯು ದಲಿತರು ಶಾಸಕರಾಗಿದ್ದಾರೆ. ಇದು ಆರ್‌ಎಸ್‌ಎಸ್‌ನ ಹೋರಾಟದ ಫಲವಲ್ಲ. ಬದಲಾಗಿ ಡಾ.ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದಿಂದಾಗಿ. ಆರ್‌ಎಸ್‌ಎಸ್‌ ಸ್ಥಾಪನೆಯಾಗಿ 100 ವರ್ಷ ಸಮೀಪಿಸುತ್ತಿದೆ. ಅಸ್ಪೃಶ್ಯತೆ ನಿವಾರಣೆಗೆ ಆರ್‌ಎಸ್‌ಎಸ್‌ ರೂಪಿಸಿರುವ ಒಂದು ಯೋಜನೆ ಇದೆಯೇ?

point-4ಕೃಷಿ ಪಂಪ್‌ಸೆಟ್‌ಗಳು ಟ್ರಾನ್ಸ್‌ಪಾರ್ಮರ್‌ನಿಂದ 500 ಮೀಟರ್‌ ದೂರದಲ್ಲಿದ್ದರೆ ಸೋಲಾರ್‌ ಸಂಪರ್ಕ ಪಡೆಯಬೇಕು ಎಂದು ಆದೇಶವಾಗಿದ್ದೇ ಬಿಜೆಪಿ ಸರ್ಕಾರದಲ್ಲಿ. ಈಗ ಅದರ ವಿರುದ್ಧ ಶಾಸಕರು ತೀರ್ಥಹಳ್ಳಿಯಲ್ಲಿ ಹೋರಾಟಕ್ಕಿಳಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದನ್ನು ಪ್ರಶ್ನಿಸಿದ ಯುವ ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ, ಅವರ ತಂದೆ ವಿರುದ್ಧ ಶಾಸಕರು ಹೇಳಿಕೆ ನೀಡಿರುವುದು ಖಂಡನಾರ್ಹ.

point-5ತಾವೆಂದು ಎಂಜಲು ಕಾಸಿಗೆ ಕೈ ಒಡ್ಡಿಲ್ಲ. ಆದರೆ ಕೆಲವರು ಸಾರ್ವಜನಿಕರ ಸೇವೆ ಮಾಡುತ್ತ ‍ಶ್ರೀಮಂತರಾಗಿದ್ದಾರೆ. 1983ರ ಚುನಾವಣೆಯಲ್ಲಿ ಬಡವರಾಗಿದ್ದವರು ಈಗ ಶ್ರೀಮಂತರಾಗಿರುವುದು ಹೇಗೆ? ಸದಾ ಜನರ ಸೇವೆ ಮಾಡುತ್ತಿರುವ ಅವರಿಗೆ ದುಡಿಮೆ ಮಾಡಲು ಸಮಯ ಸಿಕ್ಕಿದ್ದಾದರೂ ಹೇಗೆ?

ಇದನ್ನೂ ಓದಿ – ಶಿಕಾರಿಪುರದಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ, ದಿನಾಂಕ ಫಿಕ್ಸ್‌, ಎಲ್ಲಿ ನಡೆಯಲಿದೆ?

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live-New

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shimoga-DC-Car-With-Board.c ಶಿಕಾರಿಪುರದಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ, ದಿನಾಂಕ ಫಿಕ್ಸ್‌, ಎಲ್ಲಿ ನಡೆಯಲಿದೆ?
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 8 ಡಿಸೆಂಬರ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಇದನ್ನೂ ಓದಿ

Mukya-Pustaka-barahagarru-press-meet
SHIVAMOGGA CITY

ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MLA-channabasappa-visit-Vidyanagara-Health-Centre.
SHIVAMOGGA CITY

ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Sahyadri-Narayana-Multispeciality-hospital-NH-Hospital.
SHIVAMOGGA CITY

ಶಿವಮೊಗ್ಗದ NH ಆಸ್ಪತ್ರೆಯಲ್ಲಿ ಸರ್ವೈವರ್ಸ್‌ ಕ್ಲಿನಿಕ್‌, ಜು.17ರಂದು ಕ್ಯಾನ್ಸರ್‌ ಬಗ್ಗೆ ಮಹತ್ವದ ಚರ್ಚೆ, ಏನಿದು ಕ್ಲಿನಿಕ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MP-BY-raghavendra-about-Shimoga-Airport-Flight
SHIVAMOGGA CITY

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Sigandur-Launch-in-Sharavathi-River
SHIVAMOGGA CITY

ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Police-nabbed-two-in-a-layout-at-Shimoga
CRIME DIARYSHIVAMOGGA CITY

ಶಿವಮೊಗ್ಗದ ಲೇಔಟ್‌ ಮೇಲೆ ಪೊಲೀಸ್‌ ರೇಡ್‌, ಗಾಂಜಾ ಪ್ಯಾಕಿಂಗ್‌ ಮಾಡ್ತಿದ್ದ ಇಬ್ಬರು ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?