ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಂಡಿಯೂರಿ ಪ್ರತಿಭಟನೆ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 14 DECEMBER 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಸರ್ಕಾರ ಬಂಡಾವಳ ಹೂಡಿಕೆ ಮಾಡಬೇಕು. ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಸಿಐಟಿಯು ಸಂಘಟನೆ ವತಿಯಿಂದ ಮಂಡಿಯೂರಿ (kneel down) ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.

Shimoga Nanjappa Hospital

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಿಐಟಿಯು ಸಂಘಟನೆಯ ಪ್ರಮುಖರು ಮಂಡಿಯೂರಿ (kneel down) ಪ್ರತಿಭಟನೆ ನಡೆಸಿದರು.

ವಿಐಎಸ್ಎಲ್ ಕಾರ್ಖಾನೆಗೆ 800 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ 2015ರಲ್ಲಿ ಕೇಂದ್ರ ಉಕ್ಕು ಸಚಿವ ನರೇಂದ್ರ ಸಿಂಗ್ ತೋಮರ್ ಭರವಸೆ ನೀಡಿದ್ದರು. 2018ರಲ್ಲಿ ಉಕ್ಕು ಸಚಿವರಾಗಿದ್ದ ಬೀರೇಂದ್ರ ಸಿಂಗ್ ಚೌದರಿ ಅವರು 6 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಭರವಸೆ ನೀಡಿದ್ದರು. ಅದರಂತೆ ತಕ್ಷಣ ಬಂಡವಾಳ ಹೂಡಿಕೆ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಬೇಕು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಮುಖ ಬದಲಾವಣೆ ಸೂಚಿಸಿದ ಕೇಂದ್ರದ ಅಧಿಕಾರಿಗಳು, ಏನದು?

ಸದ್ಯ ಕಾರ್ಖಾನೆಯಲ್ಲಿ ಒಂದು ಸಾವಾರಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರಿದ್ದಾರೆ. ಅವರಿಗೆ ಕೈ ತುಂಬ ಕೆಲಸವು ಇಲ್ಲ. ಸರಿಯಾಗಿ ವೇತನವು ಸಿಗುತ್ತಿಲ್ಲ. ಇದರಿಂದ ಕಾರ್ಮಿಕರ ಜೀವನ ದುಸ್ತರವಾಗಿದೆ. ಆದ್ದರಿಂದ ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಿ, ಇನ್ನಷ್ಟು ಕಾರ್ಮಿಕರಿಗೆ ಕೆಲಸ ಕೊಡಬೇಕು. ಯಾವುದೆ ಕಾರಣಕ್ಕೂ ಕಾರ್ಖಾನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು.

ಸಿಐಟಿಯು ಸಂಘಟನೆ ಪ್ರಮುಖರಾದ ನಾರಾಯಣ, ಹನುಮಮ್ಮ, ಕೆ.ಎಲ್.ರಾವ್, ವೇಲು, ಮುನಿರಾಜು, ಜಯಮ್ಮ, ಭಾಗ್ಯಮ್ಮ ಸೇರಿದಂತೆ ಹಲವರು ಇದ್ದರು.

Shimoga Nanjappa HOspital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment