ಶಿವಮೊಗ್ಗ ಮಾರಿಕಾಂಬ ಜಾತ್ರೆ, ಗದ್ದುಗೆ ಮೇಲೆ ದೇವಿ ಪ್ರತಿಷ್ಠಾಪನೆ, ಹೇಗಿದೆ ವೈಭವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 MARCH 2024

SHIMOGA : ತವರು ಮನೆ ಗಾಂಧಿ ಬಜಾರ್‌ನಲ್ಲಿ ಪೂಜೆ ಬಳಿಕ ಶ್ರೀ ಮಾರಿಕಾಂಬೆ ದೇವಿ ಗದ್ದುಗೆ ಏರಿದ್ದಾಳೆ. ಇಂದು ಬೆಳಗಿನ ಜಾವ ಕೋಟೆ ಮಾರಿಕಾಂಬ ದೇಗುಲದ ಗದ್ದುಗೆಯಲ್ಲಿ ದೇವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಸಾವಿರಾರು ಭಕ್ತರು ಗದ್ದುಗೆಯಲ್ಲಿ ಮಾರಿಕಾಂಬೆಯನ್ನು ಕಣ್ತುಂಬಿಕೊಂಡು ಪೂಜೆ ಸಲ್ಲಿಸಿದ್ದಾರೆ.

ಗಾಂಧಿ ಬಜಾರ್‌ನಲ್ಲಿ ಜನವೋ ಜನ

ಶ್ರೀ ಮಾರಿಕಾಂಬೆಯ ತವರು ಮನೆ ಗಾಂಧಿ ಬಜಾರ್‌ನಲ್ಲಿ ಮಂಗಳವಾರ ಬೆಳಗ್ಗೆಯಿಂದ ಶ್ರೀ ಮಾರಿಕಾಂಬೆಯನ್ನು ಪ್ರತಿಷ್ಠಾಪಿಸಲಾಗಿತ್ತು. ಅಸಂಖ್ಯ ಜನರು ತಡರಾತ್ರಿವರೆಗೂ ದೇವಿಯ ದರ್ಶನ ಪಡೆದರು. ಪೂಜೆ ಸಲ್ಲಿಸಿ ಪುನೀತರಾದರು. ರಾತ್ರಿ ಮೆರವಣಿಗೆ ಮೂಲಕ ಮಾರಿಕಾಂಬ ದೇವಿಯನ್ನು ಕೋಟೆ ಮಾರಿಕಾಂಬ ದೇವಿ ದೇಗುಲದ ಗದ್ದುಗೆಗೆ ಕರೆದೊಯ್ದು ಪ್ರತಿಷ್ಠಾಪಿಸಲಾಗಿದೆ. ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಬೆಳಗಿನ ಜಾವದಿಂದ ಭಕ್ತರ ಸಾಲು

ಗುದ್ದಿಗೆ ಮೇಲೆ ವಿರಾಜಮಾನಳಾಗಿರುವ ದೇವಿಯನ್ನು ಕಣ್ತುಂಬಿಕೊಳ್ಳಲು ಬೆಳಗ್ಗೆಯಿಂದಲೇ ದೊಡ್ಡ ಸಂಖ್ಯೆಯ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಬೆಳಗಿನ ಜಾವ 4.30ರ ಹೊತ್ತಿಗೆ ಗದ್ದುಗೆ ಮೇಲೆ ದೇವಿಯನ್ನು ಪ್ರತಿಷ್ಠಾಪಿಸಲಾಯಿತು. ಆಗಿನಿಂದಲೇ ದರ್ಶನ, ಪೂಜೆ ಆರಂಭವಾಗಿದೆ. ದೇಗುಲದ ಒಳಾಂಗಣದಲ್ಲಿ ವೈಭವದ ಅಲಂಕಾರವನ್ನು ಕಣ್ತುಂಬಿಕೊಂಡು, ಭಕ್ತರು ದೇವಿಗೆ ಪೂಜೆ ಸಲ್ಲಿಸುತ್ತಿದ್ದಾರೆ.

ನೂಕು ನುಗ್ಗಲು ಉಂಟಾಗದೆ, ಭಕ್ತರು ದೇವಿಯ ದರ್ಶನಕ್ಕೆ ಪಡೆಯಲು ಅನುವಾಗುವಂತೆ ಬ್ಯಾರಿಕೇಡ್‌ ವ್ಯವಸ್ಥೆ ಮಾಡಲಾಗಿದೆ.  ದೇವಿಯನ್ನು ಗದ್ದುಗೆ ಮೇಲೆ ಪ್ರತಿಷ್ಠಾಪಿಸಿರುವ ವಿಡಿಯೋ ಇಲ್ಲಿದೆ 

 ಇದನ್ನೂ ಓದಿ –  ಕೋಟೆ ಮಾರಿಕಾಂಬ ಜಾತ್ರೆ ಕುರಿತು ನಿಮಗೆಷ್ಟು ಗೊತ್ತು? ಇಲ್ಲಿದೆ 10 ಪ್ರಮುಖ ಪಾಯಿಂಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 13, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment