ಶಿವಮೊಗ್ಗ ಗಾಂಧಿ ಬಜಾರ್‌ ಮುಂದೆ ಹುಲಿ ಘರ್ಜನೆ, ರಾಕ್ಷಸನ ಆರ್ತನಾದ, ಮಹಾದ್ವಾರಕ್ಕೆ ಜನ ಫಿದಾ

SHIVAMOGGA LIVE NEWS | 11 MARCH 2024

ಸುದ್ದಿಯ ಮುಂದಿನ ಭಾಗ ಕೆಳಗಿದೆ

SHIMOGA : ಕೋಟೆ ಮಾರಿಕಾಂಬ ದೇವಿ ಜಾತ್ರೆ ಹಿನ್ನಲೆ ಇದೇ ಮೊದಲ ಬಾರಿ ಗಾಂಧಿ ಬಜಾರ್‌ನಲ್ಲಿ ಬೃಹತ್‌ ಮಹಾದ್ವಾರ ನಿರ್ಮಿಸಲಾಗಿದೆ. ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಮಾದರಿಯ ಮಹಾದ್ವಾರ ಸ್ಥಾಪಿಸಲಾಗಿದೆ. ಮಹಿಷಾಸುರ ಮರ್ದಿನಿ ಕಾನ್ಸೆಪ್ಟ್‌ನಲ್ಲಿ ಮಹಾದ್ವಾರ ನಿರ್ಮಿಸಲಾಗಿದೆ.

marikamba jatre gateway at shimoga

Shivamogga Live Promotion

ಉದ್ಘಾಟನೆಯಾಯ್ತು ಮಹಾದ್ವಾರ?

ದುರ್ಗಾದೇವಿಯು ತನ್ನ ತ್ರಿಶೂಲದಿಂದ ಮಹಿಷಾಸುರನನ್ನು ವಧಿಸಿದ್ದಳು. ಇದೇ ಕಾನ್ಸೆಪ್ಟ್‌ ಅನ್ನು ಗಾಂಧಿ ಬಜಾರ್‌ ಪ್ರವೇಶದಲ್ಲಿ ಮುಖ್ಯ ದ್ವಾರವಾಗಿ ನಿರ್ಮಿಸಲಾಗಿದೆ. ಭಾನುವಾರ ಸಂಜೆ ಮಹಾದ್ವಾರವನ್ನು ಉದ್ಘಾಟಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಸ್‌.ಕೆ.ಮರಿಯಪ್ಪ, ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌, ಕಲಾವಿದ ಜೀವನ್‌ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

marikamba jatre gateway at shimoga

ಫೋಟೊ, ವಿಡಿಯೋ, ಸೆಲ್ಫಿ

ಮಹಾದ್ವಾರ ಉದ್ಘಾಟನೆಯಾಗುತ್ತಿದ್ದಂತೆ ಜನರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದರು. ಮಹಾದ್ವಾರವನ್ನು ಕಣ್ತುಂಬಿಕೊಂಡರು. ಫೋಟೊ, ವಿಡಿಯೋ ತೆಗೆದು, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿ ಖುಷಿ ಪಟ್ಟರು. ವಾಹನ ದಟ್ಟಣೆ ನಿಯಂತ್ರಿಸುವ ಸಲುವಾಗಿ ಪೊಲೀಸರು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಗಾಂಧಿ ಬಜಾರ್‌ ಪ್ರವೇಶದ್ವಾರದಲ್ಲಿ ಬ್ಯಾರಿಕೇಡ್‌ ಹಾಕಿದ್ದರು.

ಮಹಾದ್ವಾರ ಕುರಿತು 3 ವಿಶೇಷತೆಗಳು ಇಲ್ಲಿವೆ

point-1ಮಹಿಷಾಸುರ ಮರ್ದಿನಿ ಕಾನ್ಸೆಪ್ಟ್‌ನ ಮಹಾದ್ವಾರವನ್ನು ನಿರ್ಮಿಸಲು 45 ದಿನ ಸಮಯ ಹಿಡಿದಿದೆ. ಮೂರ್ತಿಗಳು 22 ಅಡಿ ಅಗಲ, 26 ಅಡಿ ಎತ್ತರವಿದೆ. ದುರ್ಗಾದೇವಿ, ಹುಲಿ ಮತ್ತು ರಾಕ್ಷಸನ ಕಲಾಕೃತಿಗಳಿವೆ. ಇದೇ ಮೊದಲ ಬಾರಿ ಎಲ್ಲ ಕಲಾಕೃತಿಗಳು ಆಕ್ಷನ್‌ ಮಾಡುತ್ತಿವೆ. ದುರ್ಗಾದೇವಿಯ ಎರಡು ಕೈಗಳು ಮತ್ತು ತ್ರಿಶೂಲ ಆಕ್ಷನ್‌ ಮಾಡುತ್ತಿವೆ. ರಾಕ್ಷಸನ ಕೈ ಮತ್ತು ತಲೆ, ಹುಲಿಯ ಕಾಲುಗಳು ಮತ್ತು ತಲೆ ಆಕ್ಷನ್‌ ಮಾಡುತ್ತವೆ. ಇನ್ನು, ಈ ಆಕ್ಷನ್‌ಗೆ ತಕ್ಕ ಹಾಗೆ ಈ ಬಾರಿ ಆಡಿಯೋ ಮಿಕ್ಸ್‌ ಕೂಡ ಇದೆ.

marikamba jatre gateway at shimoga

ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ, ಯಾವ್ಯಾವ ದಿನ ಏನೇನು ಪೂಜೆ, ಕಾರ್ಯಕ್ರಮ ನಡೆಯಲಿದೆ? ಇಲ್ಲಿದೆ ಪಟ್ಟಿ

point-2ಕಲಾಕೃತಿಯಲ್ಲಿ ಸಹಜತೆಗೆ ಹೆಚ್ಚು ಒತ್ತು ನೀಡಲಾಗಿದೆ. ದುರ್ಗಾದೇವಿಯ ತಲೆಗೂದಲನ್ನು ಕಲ್ಕತ್ತದಿಂದ ತರಿಸಲಾಗಿದೆ. ಇದು ಸಹಜ ಕೂದಲಿನಂತಿದೆ. ಇನ್ನು ಹುಲಿಗಾಗಿ ಮುಂಬೈನಿಂದ ಫರ್‌ ತರಿಸಲಾಗಿದೆ. ಅದರ ಮೇಲೆ ರೇಖೆಗಳನ್ನು ಪೇಂಟ್‌ ಮಾಡಲಾಗಿದೆ. 25 ಕಾರ್ಮಿಕರು ಹಗಲು – ರಾತ್ರಿ ಕೆಲಸ ಮಾಡಿದ್ದಾರೆ.  

ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬ ಜಾತ್ರೆ, ಇದೇ ಮೊದಲು ದೇಗುಲದಲ್ಲಿ ಅತ್ಯಂತ ವಿಭಿನ್ನ ಅಲಂಕಾರ, ಐಡಿಯಾ ಯಾರದ್ದು ಗೊತ್ತಾ?

point-3ಓತಿಘಟ್ಟದ ಜೀವನ್‌ ಕಲಾ ಸನ್ನಿಧಿಯಲ್ಲಿ ಕಲಾವಿದ ಜೀವನ್‌ ನೇತೃತ್ವದಲ್ಲಿ ಮಹಾದ್ವಾರ ನಿರ್ಮಿಸಲಾಗಿದೆ. ಹಿಂದೂ ಮಹಾಸಭಾ ಗಣಪತಿ ಮಹಾದ್ವಾರವನ್ನು ಕಲಾವಿದ ಜೀವನ್‌ ಅವರೆ ನಿರ್ಮಿಸುತ್ತಿದ್ದಾರೆ. ಕೆಜಿಎಫ್‌ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕಲಾ ವಿಭಾಗದಲ್ಲಿ ಜೀವನ್‌ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ, ಹೊರ ರಾಜ್ಯದಲ್ಲಿ ವಿವಿಧ ಕಲಾಕೃತಿಗಳನ್ನು ಜೀವನ್‌ ನಿರ್ಮಿಸಿದ್ದರೆ.

marikamba jatre gateway at shimoga

marikamba jatre gateway at shimoga

marikamba jatre gateway at shimoga

marikamba jatre gateway at shimoga

marikamba jatre gateway at shimoga

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment