ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 ಮಾರ್ಚ್ 2022
ಕೋಟೆ ರಸ್ತೆಯಲ್ಲಿ ಸ್ಥಾಪನೆ ಮಾಡಲಾಗಿರುವ ಮಳಿಗೆಗಳು ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಮೆರಗು ಹೆಚ್ಚಿಸಿವೆ. ಜಾತ್ರೆಗೆ ಬಂದ ಭಕ್ತರು ಮಳಿಗೆಗಳ ಮುಂದೆ ಗುಂಪುಗೂಡಿದ್ದು, ಹಲವು ವಸ್ತುಗಳ ಖರೀದಿಯಲ್ಲಿ ಮಗ್ನರಾಗಿದ್ದಾರೆ.
ಮಳಿಗೆಗಳ ಮೇಲೆ ಕೇಸರಿ ಧ್ವಜ
ಜಾತ್ರೆಯ ಮಳಿಗೆ ಹಂಚಿಕೆ ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಹಿಂದೂಗಳ ಹೊರತು ಅನ್ಯ ಧರ್ಮಿಯರು ಮಳಿಗೆ ಸ್ಥಾಪಿಸಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದವು. ಹಾಗಾಗಿ ಮಳಿಗೆಗಳ ಸಂಖ್ಯೆ ಕಡಿಮೆಯಾಗಿದೆ. ಈಗ ಸ್ಥಾಪನೆ ಆಗಿರುವ ಮಳಿಗೆಗಳ ಮುಂದೆ ಕೇಸರಿ ಧ್ವಜಗಳನ್ನು ಹಾರಿಸಲಾಗಿದೆ.
ನೂರು ಮಳಿಗೆಗಳಿಗೆ ಅವಕಾಶ
ಈ ಭಾರಿ ಜಾತ್ರೆಯಲ್ಲಿ ಸುಮಾರು ನೂರು ಮಳಿಗೆಗಳನ್ನು ಹಾಕಲಾಗಿದೆ. ವಿವಿಧ ತಿಂಡಿ, ತಿನಿಸು, ಕ್ಯಾಂಟೀನ್, ಅಲಂಕಾರಿಕ ವಸ್ತುಗಳು, ಟ್ಯಾಟೋ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಾತ್ರೆಗೆ ಬಂದ ಜನರು ಬಹುತೇಕ ಎಲ್ಲಾ ಮಳಿಗೆಗಳ ಮುಂದೆ ಗುಂಪುಗೂಡಿದ್ದಾರೆ. ತಮ್ಮಿಷ್ಟದ ವಸ್ತುಗಳ ಖರೀದಿಯಲ್ಲಿ ನಿರತವಾಗಿದ್ದಾರೆ.
ಮಾನಿನಿಯರ ಮನ ಸೆಳೆದ ನಾವೆಲ್ಟಿ
ವಿವಿಧ ಬಗೆಯ ಸರಗಳು, ಹಲವು ಡಿಸೈನ್ ಬಳೆಗಳು ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳು ಮಾನಿನಿಯರ ಮನ ಸೆಳೆದಿವೆ. ನಾವೆಲ್ಟಿ ಶಾಪ್’ಗಳ ಮುಂದೆ ಮಹಿಳೆಯರು, ಯುವತಿಯರು ಸಾಲುಗಟ್ಟಿ ನಿಂತಿದ್ದಾರೆ. ತಮ್ಮಿಷ್ಟದ ಚೈನು, ಬಳೆ, ಇಯರ್ ರಿಂಗ್ಸ್ ಆಯ್ಕೆಯಲ್ಲಿ ತೊಡಗಿದ್ದಾರೆ.
ಬಾಜಿ ಕಟ್ಟಿ ಆಟ ಆಡು
ಇನ್ನು, ಜಾತ್ರೆಯಲ್ಲಿ ವಿವಿಧ ಆಟಗಳ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಬಾಜಿ ಕಟ್ಟಿ ಆಡುವ ಆಟಗಳು ಹಲವರನ್ನು ಸೆಳೆಯುತ್ತಿವೆ. ಹೆಚ್ಚಿನ ಸಂಖ್ಯೆಯ ಯುವಕರು ಈ ಆಟಗಳಲ್ಲಿ ಮಗ್ನರಾಗಿದ್ದಾರೆ.

ಹಠಕ್ಕೆ ಬೀಳುವ ಮಕ್ಕಳು
ಆಟಿಕೆಗಳ ಮಳಿಗೆಗಳು ಮಕ್ಕಳನ್ನು ಆಕರ್ಷಿಸುತ್ತಿವೆ. ಆಟಿಕೆಗಳನ್ನು ಕೊಡಿಸುವಂತೆ ಮಕ್ಕಳು ಪೋಷಕರನ್ನು ದುಂಬಾಲು ಬೀಳುವುದು, ಹಠ ಹಿಡಿಯವುದು ಜಾತ್ರೆಯಲ್ಲಿ ಸಾಮಾನ್ಯವಾಗಿವೆ. ಬಲೂನು, ಪೀಪಿಗಳು ಸೇರಿದಂತೆ ವಿವಿಧ ಆಟಿಕೆಗಳು ಭರ್ಜರಿಯಾಗಿ ಮಾರಾಟವಾಗುತ್ತಿವೆ.
ಅನ್ಯ ಧರ್ಮಿಯರಿಗೆ ಮಳಿಗೆ ಹಾಕಲು ಅವಕಾಶ ಇಲ್ಲದಿರುವುದು ಮಳಿಗೆಗಳ ಸಂಖ್ಯೆ ಕಡಿಮೆ ಇದೆ. ಆದರೆ ಜಾತ್ರೆಯ ಗಮ್ಮತ್ತಿಗೇನು ಕೊರತೆ ಇಲ್ಲವಾಗಿದೆ. ಬೆಳಗ್ಗೆಯಿಂದಲೇ ಮಳಿಗೆಗಳು ಜನರನ್ನು ಸೆಳೆಯುತ್ತಿವೆ.







ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200


–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















