ಸಿ.ಟಿ.ರವಿ ಕ್ಷಮೆ ಕೇಳದಿದ್ದರೆ ಕೇಸ್‌ | ಭದ್ರಾವತಿಯಲ್ಲಿ 9 ಕಡೆ ಗೃಹಲಕ್ಷ್ಮಿ ಸಂವಾದ | ಈವರೆಗಿನ ಟಾಪ್‌ 3 ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 25 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಿ.ಟಿ.ರವಿ ನ್ಯಾಯಮೂರ್ತಿಗಳ ಕ್ಷಮೆ ಕೇಳಬೇಕು

SHIMOGA : ನ್ಯಾಯಮೂರ್ತಿ ಹೆಚ್‌.ಎನ್.‌ನಾಗಮೋಹನ ದಾಸ್‌ ಅವರ ವಿರುದ್ಧ ಬಿಜೆಪಿ (bjp) ಮುಖಂಡ ಸಿ.ಟಿ.ರವಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತಕ್ಷಣ ಕ್ಷಮೆ ಯಾಚಿಸಬೇಕು. ಇಲ್ಲವಾದರಲ್ಲಿ ಸಿ.ಟಿ.ರವಿ (C.T Ravi) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಕೀಲ ಮತ್ತು ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ನ ಕೆ.ಪಿ.ಶ್ರೀಪಾಲ್‌ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 40 ಪರ್ಸೆಂಟ್‌ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನ್ಯಾ. ನಾಗಮೋಹನ್‌ ದಾಸ್‌ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿ, ನ್ಯಾಯಮೂರ್ತಿ ಅವರ ಗೌರವಕ್ಕೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ್ದಾರೆ ಎಂದು ಆಪಾದಿಸಿದರು.

ct%20ravi%20issue

 

ಭದ್ರಾವತಿಯ 9 ಕಡೆ ಗೃಹಲಕ್ಷ್ಮಿ ನೇರ ಸಂವಾದ

FATAFAT-NEWS-2BHADRAVATHI : ನಗರಸಭೆ ವ್ಯಾಪ್ತಿಯಲ್ಲಿ ಆ.30 ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. 9 ಕಡೆ ಕಾರ್ಯಕ್ರಮ ನಡೆಯಲಿದೆ. ತಾಲೂಕು ಕಚೇರಿ ರಸ್ತೆಯ ವೀರಶೈವ ಸಭಾ ಭವನ, ಜನ್ನಾಪುರದ ಮಲ್ಲೇಶ್ವರ ಕಲ್ಯಾಣ ಮಂಟಪ, ಮಾದವನಗರದ ಬಸವ ಮಂಟಪ, ಕಡದಕಟ್ಟೆಯ ಶ್ರೀ ವಿದ್ಯಾಧಿರಾಜ ಸಭಾ ಭವನ, ಅನ್ವರ್‌ ಕಾಲೋನಿಯ ಮದರಸ ಶಾದಿ ಮಹಲ್‌, ಹೊಸಮನೆ ಹಿಂದು ಮಹಾಸಭಾ ಗಣಪತಿ ಸಮುದಾಯ ಭವನ, ನ್ಯೂ ಟೌನ್‌ ಲಯನ್ಸ್‌ ಕಮ್ಯೂನಿಟಿ ಹಾಲ್‌, ಉಜ್ಜನೀಪುರದ ಡಾನ್‌ ಬಾಸ್ಕೊ ಐಟಿಐ ಆಡಿಟೋರಿಯಂ, ಬೊಮ್ಮನಕಟ್ಟೆಯ ಸರ್‌ ಎಂ.ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜು ಆಡಿಟೋರಿಯಂನಲ್ಲಿ ಸಂವಾದ ನಡೆಯಲಿದೆ. ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಗರಸಭೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ಯೂಷನ್‌ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಅಟ್ಯಾಕ್‌, ಕಾರಣವೇನು?

ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ

FATAFAT-NEWS-3SHIMOGA : ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ ಮಾಲಿಕೆಯಲ್ಲಿ ಆ.26ರ ಸಂಜೆ 5.30ಕ್ಕೆ ಸಾಹಿತಿ ಡಾ. ಚಿಂತಾಮಣಿ ಕೊಡ್ಲೆಕೆರೆ ಅವರು ಕನ್ನಡ ಅನುಭಾವ ಕಾವ್ಯದ ಒಂದು ಪಕ್ಷಿನೋಟ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ ರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಪ್ರೊ. ಎಂ.ಆಶಾಲತಾ ತಿಳಿಸಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment