| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ನವುಲೆಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ನಾಲ್ಕು ದಿನ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ (Krushi Mela) ರೈತರಿಂದ ಉತ್ತಮ ಪ್ರತಿಕ್ರಿಯ ವ್ಯಕ್ತವಾಗಿದೆ. ಮೊದಲ ದಿವನೇ ಸುಮಾರು 50 ಸಾವಿರದಷ್ಟು ಜನರು ಕೃಷಿ ಮೇಳಕ್ಕೆ ಭೇಟಿ ನೀಡಿದ್ದರು ಎಂದು ಅಂದಾಜಿಸಲಾಗಿದೆ.
ಕೃಷಿಯಲ್ಲಿನ ಆವಿಷ್ಕಾರಗಳು, ಸಂಶೋಧನೆ ಹಾಗೂ ತಾಂತ್ರಿಕತೆಗಳ ಬಗ್ಗೆ ರೈತರು ಮಾಹಿತಿ ಪಡೆದರು. ಮೇಳದಲ್ಲಿ ಆಹಾರ, ತಿಂಡಿ ಮಳಿಗೆಗಳು ಇದ್ದು, ಧಾರವಾಡ ಪೇಡೆ, ಬೆಳಗಾವಿಯ ಕುಂದಾ, ಮೇಲುಕೋಟೆಯ ಪುಳಿಯೊಗರೆ, ಮಲೆನಾಡಿನ ಸಿಹಿ ಖಾದ್ಯ ತೊಡದೇವು, ಕೋಳಿಗಸಿ, ಅಕ್ಕಿ ಕಡುಬು, ಚಿಕನ್ ಬಿರಿಯಾನಿ ಸ್ಟಾಲ್ಗಳು ಇಲ್ಲಿವೆ. ಬಟ್ಟೆ, ಗೃಹೋಪಯೋಗಿ ವಸ್ತುಗಳು, ಆಟಿಕೆಗಳ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನವೇ ನರ್ಸರಿಗಳಲ್ಲಿ ಮುಗಿಬಿದ್ದಿದ್ದ ರೈತರು ಹಣ್ಣು, ತರಕಾರಿ, ಹೂವಿಮ ಗಿಡಗಳು, ಅರಣ್ಯ ಕೃಷಿಗೆ ಸಸಿಗಳನ್ನು ಖರೀದಿಸಿ ಕೊಂಡೊಯ್ದರು.
ಮೇಳದ ಮೊದಲ ದಿನ 45,000 ರೈತರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ಆದರೆ ನೋಂದಣಿ ಮಾಡಿಸಿಕೊಳ್ಳದೆ ಭೇಟಿ ನೀಡಿದವರ ಸಂಖ್ಯೆ ಅಧಿಕವಿದೆ.
ಕೃಷಿ ಮತ್ತು ತೋಟಗಾರಿಕೆ ಮೇಳ 2025ರಲ್ಲಿ ಸುಮಾರು 225 ಹೈಟೆಕ್ ಮಳಿಗೆಗಳು, 150 ಎಕಾನಮಿ ಮಳೆಗಳು, 25 ಯಂತ್ರೋಪಕರಣ ಮಳಿಗೆಗಳು, 40 ಆಹಾರ ಮಳಿಗೆಗಳು ಸೇರಿ ಸುಮಾರು 450ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ. (ಕೆಳಗಿರುವ ಫೋಟೊಗಳ ಮೇಲೆ ಕ್ಲಿಕ್ ಮಾಡಿ 30ಕ್ಕೂ ಹೆಚ್ಚು ಫೋಟೊ ವೀಕ್ಷಿಸಿ)
ಎರಡನೇ ದಿನವು ಉತ್ತಮ ಪ್ರತಿಕ್ರಿಯೆ
ಎರಡನೇ ದಿನವು ಕೃಷಿ ಮೇಳಕ್ಕೆ ರೈತರು, ಶಿವಮೊಗ್ಗದ ನಿವಾಸಿಗಳು ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ವಿವಿಧ ಸ್ಟಾಲ್ಗಳಿಗೆ ತೆರಳಿ ಮಾಹಿತಿ ಪಡೆದು, ಖರೀದಿಯಲ್ಲಿ ತೊಡಿಗಿಸಕೊಂಡಿದ್ದಾರೆ.
ಇದನ್ನೂ ಓದಿ » ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗೆ ಕಂಪ್ಲೇಂಟ್
Krushi Mela
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()