ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ. ಸರ್ಕಾರದ ಜೊತೆಗೆ ನೌಕರರ ಸಂಘ ನಡೆಸಿದ ಸಭೆಯಲ್ಲಿ ಮುಷ್ಕರ ಹಿಂಪಡೆಯುವುದಾಗಿ ನೌಕರರು ತಿಳಿಸಿದ್ದಾರೆ. ಅದರಂತೆ ಶಿವಮೊಗ್ಗ ಬಸ್ ನಿಲ್ದಾಣದಿಂದಲೂ ಬಸ್ ಸಂಚಾರ ಆರಂಭವಾಗುತ್ತಿದೆ.
ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ಕೆಎಸ್ಆರ್ಟಿಸಿ ಬಸ್ಗಳಿಗೆ ಜೀಪ್ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?
ನಿಲ್ದಾಣಕ್ಕೆ ಬಂದ ಬಸ್ಸುಗಳು
ಮುಷ್ಕರ ಹಿಂಪಡೆಯುತ್ತಿದ್ದಂತೆ ನೌಕರರು ಕೆಲಸಕ್ಕೆ ಮರಳುತ್ತಿದ್ದಾರೆ. ಬೆಳಗ್ಗೆಯಿಂದ ಖಾಲಿ ಇದ್ದ ನಿಲ್ದಾಣಕ್ಕೆ ಬಸ್ಸುಗಳು ಬರಲು ಆರಂಭವಾಗಿದೆ. ಈ ನಡುವೆ ಅನಿಶ್ಚಿತತೆಯಿಂದಾಗಿ ಗೊಂದಲಕ್ಕೀಡಾಗಿದ್ದ ಪ್ರಯಾಣಿಕರು ಈಗ ಬಸ್ ನಿಲ್ದಾಣದ ಕಡೆ ಬರಲು ಆರಂಭಿಸಿದ್ದಾರೆ.
ಇದನ್ನೂ ಓದಿ | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು?
ಪ್ರಯಾಣಿಕರ ಅನುಕೂಲಕ್ಕೆ ಸೇವೆ
ಶಿವಮೊಗ್ಗ ಬಸ್ ನಿಲ್ದಾಣದಿಂದ ಮೊದಲಿಗೆ ಒಂದೆರಡು ಬಸ್ಸುಗಳು ಸಂಚಾರ ಆರಂಭಿಸಿದವು. ತಿರುವಣಮಲೈ, ಹೈದರಾಬಾದ್ಗೆ ಬಸ್ಸುಗಳು ಹೊರಟಿವೆ. ಅದರ ಬೆನ್ನಿಗೆ ಇನ್ನಷ್ಟು ಬಸ್ಸುಗಳನ್ನು ಬಿಡಲು ವಿಭಾಗದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು, ಮೈಸೂರು ಸೇರಿದಂತೆ ಅತಿ ಹೆಚ್ಚು ಪ್ರಯಾಣಿಕರು ಸಂಚರಿಸುವ ಕಡೆಗೆ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಬಿಡಲು ನಿರ್ಧರಿಸಲಾಗಿದೆ.



ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾರು ಚೇಸ್ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

- ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

- ಸಿಗಂದೂರು ಲಾಂಚ್ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

- ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು
















