ನೌಕರರ ಮುಷ್ಕರ ಅಂತ್ಯ, ಶಿವಮೊಗ್ಗದಿಂದ ಹೊರಡಲು ಸಿದ್ಧವಾದವು ಸರ್ಕಾರಿ ಬಸ್ಸುಗಳು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ. ಸರ್ಕಾರದ ಜೊತೆಗೆ ನೌಕರರ ಸಂಘ ನಡೆಸಿದ ಸಭೆಯಲ್ಲಿ ಮುಷ್ಕರ ಹಿಂಪಡೆಯುವುದಾಗಿ ನೌಕರರು ತಿಳಿಸಿದ್ದಾರೆ. ಅದರಂತೆ ಶಿವಮೊಗ್ಗ ಬಸ್ ನಿಲ್ದಾಣದಿಂದಲೂ ಬಸ್ ಸಂಚಾರ ಆರಂಭವಾಗುತ್ತಿದೆ.

ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಜೀಪ್‌ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?

ನಿಲ್ದಾಣಕ್ಕೆ ಬಂದ ಬಸ್ಸುಗಳು

ಮುಷ್ಕರ ಹಿಂಪಡೆಯುತ್ತಿದ್ದಂತೆ ನೌಕರರು ಕೆಲಸಕ್ಕೆ ಮರಳುತ್ತಿದ್ದಾರೆ. ಬೆಳಗ್ಗೆಯಿಂದ ಖಾಲಿ ಇದ್ದ ನಿಲ್ದಾಣಕ್ಕೆ ಬಸ್ಸುಗಳು ಬರಲು ಆರಂಭವಾಗಿದೆ. ಈ ನಡುವೆ ಅನಿಶ್ಚಿತತೆಯಿಂದಾಗಿ ಗೊಂದಲಕ್ಕೀಡಾಗಿದ್ದ ಪ್ರಯಾಣಿಕರು ಈಗ ಬಸ್ ನಿಲ್ದಾಣದ ಕಡೆ ಬರಲು ಆರಂಭಿಸಿದ್ದಾರೆ.

ಇದನ್ನೂ ಓದಿ | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು?

ಪ್ರಯಾಣಿಕರ ಅನುಕೂಲಕ್ಕೆ ಸೇವೆ

ಶಿವಮೊಗ್ಗ ಬಸ್ ನಿಲ್ದಾಣದಿಂದ ಮೊದಲಿಗೆ ಒಂದೆರಡು ಬಸ್ಸುಗಳು ಸಂಚಾರ ಆರಂಭಿಸಿದವು. ತಿರುವಣಮಲೈ, ಹೈದರಾಬಾದ್‍ಗೆ ಬಸ್ಸುಗಳು ಹೊರಟಿವೆ. ಅದರ ಬೆನ್ನಿಗೆ ಇನ್ನಷ್ಟು ಬಸ್ಸುಗಳನ್ನು ಬಿಡಲು ವಿಭಾಗದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು, ಮೈಸೂರು ಸೇರಿದಂತೆ ಅತಿ ಹೆಚ್ಚು ಪ್ರಯಾಣಿಕರು ಸಂಚರಿಸುವ ಕಡೆಗೆ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಬಿಡಲು ನಿರ್ಧರಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment