| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021
ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಹಿನ್ನೆಲೆ ಶಿವಮೊಗ್ಗ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಖಾಲಿಯಾಗಿದೆ. ಸಿಬ್ಬಂದಿಗಳು ಗೈರಾಗಿರುವುದರಿಂದ ಬಸ್ಸುಗಳು ನಿಲ್ದಾಣಕ್ಕೆ ಬಂದಿಲ್ಲ. ಇನ್ನು, ಪ್ರಯಾಣಿಕರು ಇಲ್ಲದೆ ಬಣಗುಡುತ್ತಿದೆ.
ಇದನ್ನೂ ಓದಿ | KSRTC ಬಸ್ ಮುಷ್ಕರ, ಶಿವಮೊಗ್ಗ ನಿಲ್ದಾಣದಲ್ಲಿ ರಾತ್ರಿ ಹೇಗಿದೆ ಪರಿಸ್ಥಿತಿ?
ಶಿವಮೊಗ್ಗ ಬಸ್ ನಿಲ್ದಾಣ ಖಾಲಿಯಾಗಿದೆ. ರಾತ್ರಿಯಿಂದಲೇ ಸಿಬ್ಬಂದಿಗಳ ಕೊರತೆ ಉಂಟಾಗಿತ್ತು. ಬೆಳಗ್ಗೆ ಹೊತ್ತಿಗೆ ನೌಕರರು ಕರ್ತವ್ಯಕ್ಕೆ ಗೈರಾಗಿದ್ದಾರೆ. ಆದ್ದರಿಂದ ಘಟಕದಲ್ಲಿರುವ ಬಸ್ಸುಗಳು ನಿಲ್ದಾಣಕ್ಕೆ ಬಂದಿಲ್ಲ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲವು ಜನರು, ಕೆಎಸ್ಆರ್ಟಿಸಿ ಸಿಬ್ಬಂದಿಗಳಿದ್ದಾರೆ.
ಸಾವಿರಕ್ಕೂ ಹೆಚ್ಚು ಬಸ್ ಸಂಚಾರ
ಶಿವಮೊಗ್ಗ ಬಸ್ ನಿಲ್ದಾಣದಿಂದ ಪ್ರತಿದಿನ ಸಾವಿರಕ್ಕೂ ಹೆಚ್ಚು ಬಸ್ಸುಗಳು ಸಂಚರಿಸುತ್ತವೆ. ಶಿವಮೊಗ್ಗ ಘಟಕ ಮತ್ತು ವಿವಿಧೆಡೆಯಿಂದ ಬರುವ ಬಸ್ಸುಗಳು ಸೇರಿ ಸುಮಾರು 1300 ಬಸ್ಸುಗಳು ನಿಲ್ದಾಣಕ್ಕೆ ಬಂದು ಹೋಗುತ್ತವೆ. ಆದರೆ ನೌಕರರ ಮುಷ್ಕರದಿಂದಾಗಿ ಬೆಳಗ್ಗೆಯಿಂದ ಒಂದೂ ಬಸ್ ನಿಲ್ದಾಣಕ್ಕೆ ಬಂದಿಲ್ಲ ಅನ್ನುತ್ತಾರೆ ಶಿವಮೊಗ್ಗ ನಿಲ್ದಾಣದ ನಿಯಂತ್ರಣಾಧಿಕಾರಿ ಸಿದ್ದೇಶ್.
ಎಲ್ಲೆಲ್ಲಿಗೆ ಎಷ್ಟು ಬಸ್ ಸಂಚರಿಸುತ್ತಿದ್ದವು?
ಶಿವಮೊಗ್ಗ ನಿಲ್ದಾಣದಿಂದ ಪ್ರತಿದಿನ ವಿವಿಧ ಜಿಲ್ಲೆಗಳು ಬಸ್ಸುಗಳು ಸಂಚರಿಸುತ್ತವೆ. ಬೆಂಗಳೂರಿಗೆ 141, ಮೈಸೂರಿಗೆ 63, ಹಾಸನ 26, ಗದಗ 11, ಚಿತ್ರದುರ್ಗ 23, ಉಡುಪಿ – ಮಂಗಳೂರು 17, ಚಿಕ್ಕಮಗಳೂರು – ಧರ್ಮಸ್ಥಳ 96, ರಾಯಚೂರು – ಹೈದರಾಬಾದ್ 93, ಬೆಳಗಾವಿ – ಪೂನಾ – ಮುಂಬೈ 45, ಹರಿಹರ – ದಾವಣಗೆರೆ 53, ಬನವಾಸಿ- ಆನವಟ್ಟಿ – ಶಿರಸಿ 17, ಕೊಲ್ಲೂರು – ಬೈಂದೂರು – ಭಟ್ಕಳ 8, ಶಿರಸಿ – ಕಾರವಾರ 43 ಸೇರಿದಂತೆ ವಿವಿಧೆಡೆ ಬಸ್ಸುಗಳು ಸಂಚರಿಸುತ್ತಿದ್ದವು. ಪ್ರತಿ ದಿನ ಅಂದಾಜು 30 ಸಾವಿರ ಪ್ರಯಾಣಿಕರು ನಿಲ್ದಾಣಕ್ಕೆ ಬಂದು ಹೋಗುತ್ತಿದ್ದರು.
ಇವತ್ತು ಹೇಗಿದೆ ಬಸ್ ನಿಲ್ದಾಣ? ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()