ಶಿವಮೊಗ್ಗ: ಬೊಮ್ಮನಕಟ್ಟೆ ಮಾರ್ಗವಾಗಿ ಶಿವಮೊಗ್ಗ, ಭದ್ರಾವತಿಗೆ ಸಂಪರ್ಕ ಕಲ್ಪಿಸುವ KSRTC ನಗರ ಸಾರಿಗೆ ಬಸ್ಗೆ ಸಚಿವ ಮಧು ಬಂಗಾರಪ್ಪ ಹಸಿರು ನಿಶಾನೆ ತೋರಿಸಿದರು.
ಬೊಮ್ಮನಕಟ್ಟೆ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ನಗರ ಸಾರಿಗೆ ಬಸ್ ಇಂದಿನಿಂದ ಸಂಚಾರ ಆರಂಭಿಸಿದೆ. ಈ ಭಾಗದಲ್ಲಿ ಬಹು ದಿನದಿಂದ ಸರ್ಕಾರಿ ಬಸ್ ಸಂಪರ್ಕಕ್ಕೆ ಬೇಡಿಕೆ ಇತ್ತು. ಯುವ ಕಾಂಗ್ರೆಸ್ ಮುಖಂಡ ಕೆ.ಚೇತನ್ ಅವರು ಸಾರಿಗೆ ಬಸ್ ಸಂಪರ್ಕಕ್ಕೆ ಮನವಿ ಸಲ್ಲಿಸಿ, ಬಸ್ ಸಂಚಾರಕ್ಕೆ ಶ್ರಮಿಸಿದ್ದರು.
ಬಸ್ಗೆ ಚಾಲನೆ ನೀಡುವ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಯೋಗೀಶ್, ಎನ್. ರಮೇಶ್, ವಿಜಯಲಕ್ಷ್ಮಿ ಪಾಟೀಲ್, ರಮೇಶ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಖಲೀಂ ಪಾಷ, ಕೆ.ಚೇತನ್, ಮಧುಸೂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200