ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ಗಳ ಮೇಲಿನ ಗುಟ್ಕಾ ಕಂಪನಿ ಜಾಹೀರಾತುಗಳನ್ನು (Advertisements) ತೆರವುಗೊಳಿಸಿದ ಕರವೇ ಸಿಂಹಸೇನೆ ಸದಸ್ಯರು ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿಹಂಚಿದರು.
ಸಂಘಟನೆಯ ಅಧ್ಯಕ್ಷ ಎಂ.ರವಿಪ್ರಸಾದ್ ಮಾತನಾಡಿ, ಎರಡು ತಿಂಗಳ ಹಿಂದೆಯೇ ಕೆಎಸ್ಆರ್ಟಿಸಿ ಬಸ್ ಮೇಲಿನ ಗುಟ್ಕಾ ಮತ್ತಿತರ ಮಾದಕ ವಸ್ತುಗಳ ಜಾಹೀರಾತು ಹಾಗೂ ಆಂಗ್ಲ ಭಾಷೆಯಲ್ಲಿರುವ ಜಾಹೀರಾತುಗಳನ್ನು ತೆರವು ಮಾಡುವಂತೆ ಶಿವಮೊಗ್ಗದಿಂದಲೇ ಹೋರಾಟ ಆರಂಭಿಸಿದ್ದೆವು ಎಂದರು.
ಇದನ್ನೂ ಓದಿ – ಸಕ್ರೆಬೈಲು ಬಳಿ ಬಸ್ಸು ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರಿನಲ್ಲೂ ಇದೇ ವಿಷಯದಲ್ಲಿ ಹೋರಾಟ ಮಾಡಲಾಗಿತ್ತು. ಈ ಸಂಬಂಧ ಸಾರಿಗೆ ಸಚಿವರಿಗೂ ಮನವಿ ನೀಡಲಾಗಿತ್ತು. ಈ ಹಿನ್ನೆಲೆ ಸರ್ಕಾರ ಎಚ್ಚೆತ್ತುಕೊಂಡು ಸರ್ಕಾರಿ ಬಸ್ಗಳ ಮೇಲಿನ ಮಾದಕ ವಸ್ತುಗಳು, ಒಳ ಉಡುಪುಗಳು, ಇಂಗ್ಲಿಷ್ ಬರಹದ ಜಾಹೀರಾತುಗಳನ್ನು ತೆರವು ಮಾಡುವಂತೆ ಆದೇಶ ಮಾಡಿತ್ತು ಎಂದು ತಿಳಿಸಿದರು.

ಕೆಲವು ಬಸ್ಗಳಲ್ಲಿ ಇನ್ನೂ ಆಕ್ಷೇಪಾರ್ಹ ಜಾಹೀರಾತುಗಳು ಇರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕೆಲ ಜಾಹೀರಾತುಗಳನ್ನು ತೆರವು ಮಾಡಿದ್ದೇವೆ. ಸಂಬಂಧಿಸಿದವರು ಇನ್ನು ಮುಂದಾದರೂ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಸಂಘಟನೆಯ ಪ್ರಮುಖರಾದ ಮಧುಸೂದನ್, ನೂರುಲ್ಲಾ, ಅಭಿಜಿತ್ ನವುಲೆ, ರಫೀಕ್ ಇತರರಿದ್ದರು.

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





