ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020
ರಾಜ್ಯಾದ್ಯಂತ ಕೆಎಸ್ಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಶಿವಮೊಗ್ಗದಲ್ಲೂ ಬೆಂಬಲ ವ್ಯಕ್ತವಾಗಿದೆ. ಸರ್ಕಾರಿ ಸಾರಿಗೆ ಬಸ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ಮುಷ್ಕರಕ್ಕೆ ಕಾರಣ ಏನು?
- ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು, ವೇತನ ತಾರತಮ್ಯವನ್ನು ನಿವಾರಿಸಬೇಕು.
- ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾರಿಗೆ ನೌಕರರ ಬಂಧನಕ್ಕೆ ತೀವ್ರ ಆಕ್ರೋಶ.
ಬಸ್ ಸಂಚಾರ ಸ್ಟಾಪ್
ಮುಷ್ಕರದ ಹಿನ್ನೆಲೆ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಯಿತು. ದೂರದ ಊರುಗಳಿಗೆ ತೆರಳುವ ಬಸ್ಗಳನ್ನು ನಿಲ್ಲಿಸಲಾಯಿತು. ಬೇರೆ ಕಡೆಯಿಂದ ಬರುತ್ತಿದ್ದ ಬಸ್ಗಳು ಮಾತ್ರ ಪ್ರಯಾಣ ಮುಂದುವರೆಸಿದವು.
ಭದ್ರಾವತಿ, ಆಗುಂಬೆ ಬಸ್ ಸಂಚಾರ
ನಗರ ಸಾರಿಗೆ ಬಸ್ಗಳ ಸಂಚಾರವಿತ್ತು. ಭದ್ರಾವತಿ – ಶಿವಮೊಗ್ಗ, ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ ಸೇರಿದಂತೆ ನಗರ ಸಂಚಾರ ಬಸ್ಗಳು ಸಂಚರಿಸುತ್ತಿವೆ. ಆದರೆ ಇವುಗಳ ಸಂಖ್ಯೆ ಕಡಿಮೆ ಇತ್ತು.
ಪ್ರಯಾಣಿಕರ ಪರದಾಟ
ನೌಕರರ ಮುಷ್ಕರದಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಕುಟುಂಬ ಸಹಿತ, ಲಗೇಜ್ ಹೊತ್ತು ಬಂದವರು ಬಸ್ ಸಿಗದೆ ನಿಲ್ದಾಣದಲ್ಲೇ ಕುಳಿತಿರುವುದು ಸಾಮಾನ್ಯವಾಗಿತ್ತು. ದೂರದ ಊರುಗಳಲ್ಲಿ ಉದ್ಯೋಗಿಗಳು ಕೂಡ ಬಸ್ಗಾಗಿ ಕೂದು ಕೂತಿದ್ದಾರೆ.
VIDEO REPORT

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು







