ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯದಿದ್ದರೆ ರೈತರು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ.ಗಂಗಧರ್ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್, ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯಲು ಅರಿವು ಮೂಡಿಸುವ ಭಿತ್ತಿ ಪತ್ರ ಪ್ರದರ್ಶನ ಮಾಡಿ ಮಾತನಾಡಿದರು.
ಜುಲೈ 21ಕ್ಕೆ ನರಗುಂದದಲ್ಲಿ ರೈತ ಬಂಡಾಯ ನಡೆದು 41 ವರ್ಷಗಳಾಗಿವೆ. ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಿಸುವ ಜೊತೆಗೆ ಯಾವುದೇ ಕಾರಣಕ್ಕೂ ವಿದ್ಯುತ್ ಶಕ್ತಿ ಖಾಸಗೀಕರಣಗೊಳಿಸಬಾರದು ಮತ್ತು ಈ ಬಗ್ಗೆ ಬಯಲು ಸೀಮೆಯ ಜಿಲ್ಲೆಗಳಲ್ಲಿ ರೈತರಿಗೆ ಅರಿವು ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದರು.
ದೆಹಲಿಯಲ್ಲಿ ಕರ್ನಾಟಕದ ಟೆಂಟ್
ಈ ಭಾರಿ ಜು.21ರಂದು ದೆಹಲಿಯ ಗಾಜಿಪುರ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ, ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ರಾಕೇಶ್ ಟಿಕಾಯಿತ್, ಯಧ್ವಿರ್ ಸಿಂಗ್ ನೇತೃತ್ವದಲ್ಲಿ ಚಳುವಳಿ ನಡೆಸುತ್ತಿರುವ ಜಾಗಕ್ಕೆ ಕರ್ನಾಟಕದ ರೈತ ಮುಖಂಡರು ತೆರಳಿ ಒಂದು ಪ್ರತ್ಯೇಕ ಸತ್ಯಾಗ್ರಹ ಟೆಂಟ್ ಉದ್ಘಾಟಿಸುವ ಮೂಲಕ ನರಗುಂದ ರೈತರ ಹುತಾತ್ಮ ದಿನಾಚರಣೆಯನ್ನು ನಡೆಸಲಾಗುವುದು. ಜುಲೈ 22ರಂದು ಸಂಸತ್ತಿನ ಮುಂದೆ ನಡೆಯಲಿರುವ ರೈತರ ಪ್ರತಿಭಟನೆಯಲ್ಲಿ ಕರ್ನಾಟಕದ ರೈತ ಚಳುವಳಿಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಮೋಹನ್ ಕೂಡ್ಲಿಗೆರೆ, ಕೆ.ಎಸ್.ಪುಟ್ಟಪ್ಪ, ಜಿ.ಆರ್.ಸಣ್ಣರಂಗಪ್ಪ, ಕೆ.ಸಿ.ಗಂಗಾಧರ್, ಮಂಜುನಾಥ್, ದೇವಕುಮಾರ್, ಪರಮೇಶ್ವರಪ್ಪ, ಅಣ್ಣಪ್ಪ ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






