ಶಿವಮೊಗ್ಗ ಲೈವ್.ಕಾಂ | SHIMOGA | 22 ಡಿಸೆಂಬರ್ 2019
ಕುರುಬರ ಸಂಘದ ರಾಜ್ಯ ನಿರ್ದೇಶಕರ ಸ್ಥಾನಕ್ಕೆ ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ದಿಢೀರ್ ಸ್ಥಗಿತಗೊಳಿಸಲಾಗಿದೆ. ಬ್ಯಾಲೆಟ್ ಪೇಪರ್ ಅದಲು ಬದಲು ಆಗಿದ್ದರಿಂದ, ಮತಗಟ್ಟೆಯಲ್ಲಿ ಭಾರೀ ಗೊಂದಲ ಸೃಷ್ಟಿಯಾಯಿತು.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200

ಗೊಂದಲಕ್ಕೆ ಕಾರಣವೇನು?
ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಕುರುಬರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಶಿವಮೊಗ್ಗದಿಂದ ನಾಲ್ಕು ನಿರ್ದೇಶಕರ ಆಯ್ಕೆ ಆಗಬೇಕಿತ್ತು. ಆದರೆ ಬ್ಯಾಲೆಟ್ ಪುಸ್ತಕದಲ್ಲಿ ಶಿವಮೊಗ್ಗ ಜಿಲ್ಲೆಯ ನಿರ್ದೇಶಕರ ಬದಲು, ಬೀದರ್ ಜಿಲ್ಲೆಯ ನಿರ್ದೇಶಕರ ಫೋಟೊ, ಚಿಹ್ನೆ ಇರುವ ಬ್ಯಾಲೆಟ್ ಪೇಪರ್’ಗಳಿದ್ದವು. ವಿಚಾರ ತಿಳಿಯುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಚುನಾವಣಾ ಅಕ್ರಮದ ಆರೋಪ ಮಾಡಿದರು.
ಗೊಂದಲ, ಗದ್ದಲ, ಮತದಾನ ಸ್ಥಗಿತ
ಬೆಳಗ್ಗೆ 9 ಗಂಟೆಗೆ ದುರ್ಗಿಗುಡಿ ಶಾಲೆಯಲ್ಲಿ ಮತದಾನ ಆರಂಭವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಸುಮಾರು 600 ಮಂದಿ ಮತ ಚಲಾಯಿಸಿದ್ದರು. ಬ್ಯಾಲೆಟ್ ಪೇಪರ್ ಗೊಂದಲ ಸೃಷ್ಟಿಯಾಗುತ್ತಿದ್ದಂತೆ ಮತ ಕೇಂದ್ರದಲ್ಲಿ ಗೊಂದಲ, ಗದ್ದಲ ಶುರುವಾಯಿತು. ಪೊಲೀಸರು ಕೂಡಲೆ ಮತಗಟ್ಟೆ ಬಳಿ ಜನರನ್ನು ನಿಯಂತ್ರಿಸಿದರು. ಇನ್ನು, 9 ಬೂತ್’ನಲ್ಲಿ ನಡೆಯುತ್ತಿದ್ದ ಮತದಾನ ಸ್ಥಗಿತಗೊಳಿಸಲಾಯಿತು.
ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ
ಬ್ಯಾಲೆಟ್ ಪೇಪರ್’ನಲ್ಲಿ ಗೊಂದಲಕ್ಕೆ ಚುನಾವಣಾಧಿಕಾರಿಗಳೇ ಕಾರಣ ಎಂದು ಆರೋಪಿಸಿ, ಕೆಲವರು ಮತಗಟ್ಟೆಯಲ್ಲಿಯೇ ಪ್ರತಿಭಟನೆ ನಡೆಸಿದರು. ಚುನಾವಣಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಈ ನಡುವೆ ಸ್ಥಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಅಭ್ಯರ್ಥಿಗಳು, ಚುನಾವಣಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ನಂತರ ಸ್ಥಳಕ್ಕೆ ಬಂದ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಅಭ್ಯರ್ಥಿಗಳು, ಚುನಾವಣಾಧಿಕಾರಿ ಅವರನ್ನು ಪ್ರತ್ಯೇಕ್ಷ ಕೊಠಡಿಯಲ್ಲಿ ಕೂರಿಸಿ ಸಭೆ ನಡೆಸಿದರು.
ಎಲೆಕ್ಷನ್ ಮುಂದೂಡಿದ ಚುನಾವಣಾಧಿಕಾರಿ
ಸಭೆ ಬಳಿಕ ಚುನಾವಣಾಧಿಕಾರಿ ಸುಧೀರ್ ಪಾಷಾ ಅವರು ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿದರು. ಇದರಿಂದ ಪರಿಸ್ಥಿತಿ ಶಾಂತವಾಯಿತು. ಆದರೆ ಮತಗಟ್ಟೆಯ ಹೊರಗೆ ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]